ಭದ್ರಾ ಜಲಾಶಯದ ಗೇಟ್‌ಗಳು ರಿಪೇರಿ ಪೂರ್ಣ, ಅಚ್ಚುಕಟ್ಟು ರೈತರ ಆತಂಕ ದೂರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 7 JULY 2024

BHADRAVATHI : ಭದ್ರಾ ಜಲಾಶಯದ ತಳಮಟ್ಟದ ಗೇಟ್‌ನಲ್ಲಿ (Gate) ಉಂಟಾಗಿದ್ದ ತಾಂತ್ರಿಕ ದೋಷ ಸರಿಪಡಿಸಲಾಗಿದೆ. ಗೇಟ್‌ಗಳನ್ನು ಬಂದ್‌ ಮಾಡಲಾಗಿದ್ದು, ನೀರು ಪೋಲು ತಡೆಯಲಾಗಿದೆ. ಇದರಿಂದ ಅಚ್ಚುಕಟ್ಟು ಭಾಗದ ರೈತರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ನಿರಂತರ ಶ್ರಮ, ರಿವರ್‌ ಗೇಟ್‌ ರಿಪೇರಿ

ಭದ್ರಾ ಜಲಾಶಯದ ಪವರ್‌ ಹೌಸ್‌ ಪಕ್ಕದಲ್ಲಿ ಇದ್ದ ರಿವರ್‌ ಗೇಟ್‌ಗಳಲ್ಲಿ ತಾಂತ್ರಿಕ ದೋಷ ಉಂಟಾಗಿತ್ತು. ಸುಮಾರು 5 ಇಂಚಿನಷ್ಟು ತೆರೆದುಕೊಂಡಿದ್ದವು. ಇದರಿಂದ ಸುಮಾರು 1500 ರಿಂದ 2 ಸಾವಿರ ಕ್ಯೂಸೆಕ್ಸ್‌ ನೀರು ಹೊಳೆಗೆ ಹರಿದು ಹೋಗುತ್ತಿತ್ತು. ವಿಷಯ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಗೇಟ್‌ ಬಂದ್‌ ಮಾಡುವ ಪ್ರಕ್ರಿಯೆ ಆರಂಭಿಸಲಾಗಿತ್ತು.

Bhadra Dam Sluice Gate work

ಜಲಾಶಯದ ಇಂಜಿನಿಯರ್‌ಗಳು, ಗುತ್ತಿಗೆದಾರ ವೇದಮೂರ್ತಿ, ನೌಕರರ ತಂಡ 48 ಗಂಟೆ ನಿರಂತರ ಶ್ರಮ ವಹಿಸಿದೆ. ರಾತ್ರಿ ಹೊತ್ತಲ್ಲು ಕೆಲಸ ನಿರ್ವಹಿಸಿ ತಾಂತ್ರಿಕ ದೋಷ ಸರಿಪಡಿಸಲಾಗಿದೆ. ಕೊನೆಗೆ ಸ್ಲೂಯಿಸ್‌ ಗೇಟ್‌ಗಳು ಬಂದ್‌ ಆಗಿವೆ. ಒಂದು ವೇಳೆ ಈ ಗೇಟ್‌ಗಳು ಬಂದ್‌ ಆಗದೆ ಇದ್ದಿದ್ದರೆ ಜಲಾಶಯದಲ್ಲಿ ಈ ಭಾರಿ ನೀರಿನ ಸಂಗ್ರಹ ಸಂಪೂರ್ಣ ಕುಸಿಯುತ್ತಿತ್ತು.

Bhadra-Dam-sluice-gate-opened

ಅಚ್ಚುಕಟ್ಟು ರೈತರ ಆತಂಕ ದೂರ

ಮಳೆಗಾಲಕ್ಕೂ ಮುನ್ನ ಜಲಾಶಯಗಳ ಗೇಟ್‌ಗಳ ನಿರ್ವಹಣೆ, ತಾಂತ್ರಿಕ ದೋಷಗಳ ಪರಿಶೀಲನೆ ನಡೆಸಲಾಗುತ್ತದೆ. ಆದರೆ ಭದ್ರಾ ಜಲಾಶಯದಲ್ಲಿ ಅಧಿಕಾರಿಗಳು ಮಳೆ ಶುರುವಾಗಿ, ಒಳ ಹರಿವು ಆರಂಭವಾದ ಮೇಲೆ ನಿರ್ಹವಣೆ ಆರಂಭಿಸಿದ್ದರು. ಈ ವೇಳೆ ರಿವರ್‌ ಗೇಟ್‌ನಲ್ಲಿ (ಸ್ಲೂಯಿಸ್‌ ಗೇಟ್‌) ತಾಂತ್ರಿಕ ಸಮಸ್ಯೆ ಉಂಟಾಗಿ ಮುಚ್ಚಲಾಗದ ಸ್ಥಿತಿಗೆ ತಲುಪಿತ್ತು. ಇದರಿಂದ ಜಲಾಶಯದಲ್ಲಿ ಸಂಗ್ರಹವಾಗಿದ್ದ ನೀರು ಅನಾಯಾಸವಾಗಿ ಹೊಳೆಗೆ ಹರಿದು ಹೋಗುತ್ತಿತ್ತು.

Bhadra Dam Sluice Gate work

ವಿಚಾರ ತಿಳಿಯುತ್ತಲೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಕೆ.ಪಿ.ಅಂಶುಕುಮಾರ್‌ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅಚ್ಚುಕಟ್ಟು ಭಾಗದ ರೈತರು ಕೂಡ ಡ್ಯಾಂಗೆ ಬಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು.

ಇದನ್ನೂ ಓದಿ – ಶಿವಮೊಗ್ಗ ವಕೀಲರ ಸಂಘಕ್ಕೆ ನೂತನ ಅಧ್ಯಕ್ಷ, ಪದಾಧಿಕಾರಿಗಳು, ಯಾರೆಲ್ಲ ಗೆದ್ದಿದ್ದಾರೆ? ಎಷ್ಟು ಮತ ಪಡೆದಿದ್ದಾರೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment