ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 7 JULY 2024
BHADRAVATHI : ಭದ್ರಾ ಜಲಾಶಯದ ತಳಮಟ್ಟದ ಗೇಟ್ನಲ್ಲಿ (Gate) ಉಂಟಾಗಿದ್ದ ತಾಂತ್ರಿಕ ದೋಷ ಸರಿಪಡಿಸಲಾಗಿದೆ. ಗೇಟ್ಗಳನ್ನು ಬಂದ್ ಮಾಡಲಾಗಿದ್ದು, ನೀರು ಪೋಲು ತಡೆಯಲಾಗಿದೆ. ಇದರಿಂದ ಅಚ್ಚುಕಟ್ಟು ಭಾಗದ ರೈತರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.
ನಿರಂತರ ಶ್ರಮ, ರಿವರ್ ಗೇಟ್ ರಿಪೇರಿ
ಭದ್ರಾ ಜಲಾಶಯದ ಪವರ್ ಹೌಸ್ ಪಕ್ಕದಲ್ಲಿ ಇದ್ದ ರಿವರ್ ಗೇಟ್ಗಳಲ್ಲಿ ತಾಂತ್ರಿಕ ದೋಷ ಉಂಟಾಗಿತ್ತು. ಸುಮಾರು 5 ಇಂಚಿನಷ್ಟು ತೆರೆದುಕೊಂಡಿದ್ದವು. ಇದರಿಂದ ಸುಮಾರು 1500 ರಿಂದ 2 ಸಾವಿರ ಕ್ಯೂಸೆಕ್ಸ್ ನೀರು ಹೊಳೆಗೆ ಹರಿದು ಹೋಗುತ್ತಿತ್ತು. ವಿಷಯ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಗೇಟ್ ಬಂದ್ ಮಾಡುವ ಪ್ರಕ್ರಿಯೆ ಆರಂಭಿಸಲಾಗಿತ್ತು.

ಜಲಾಶಯದ ಇಂಜಿನಿಯರ್ಗಳು, ಗುತ್ತಿಗೆದಾರ ವೇದಮೂರ್ತಿ, ನೌಕರರ ತಂಡ 48 ಗಂಟೆ ನಿರಂತರ ಶ್ರಮ ವಹಿಸಿದೆ. ರಾತ್ರಿ ಹೊತ್ತಲ್ಲು ಕೆಲಸ ನಿರ್ವಹಿಸಿ ತಾಂತ್ರಿಕ ದೋಷ ಸರಿಪಡಿಸಲಾಗಿದೆ. ಕೊನೆಗೆ ಸ್ಲೂಯಿಸ್ ಗೇಟ್ಗಳು ಬಂದ್ ಆಗಿವೆ. ಒಂದು ವೇಳೆ ಈ ಗೇಟ್ಗಳು ಬಂದ್ ಆಗದೆ ಇದ್ದಿದ್ದರೆ ಜಲಾಶಯದಲ್ಲಿ ಈ ಭಾರಿ ನೀರಿನ ಸಂಗ್ರಹ ಸಂಪೂರ್ಣ ಕುಸಿಯುತ್ತಿತ್ತು.

ಅಚ್ಚುಕಟ್ಟು ರೈತರ ಆತಂಕ ದೂರ
ಮಳೆಗಾಲಕ್ಕೂ ಮುನ್ನ ಜಲಾಶಯಗಳ ಗೇಟ್ಗಳ ನಿರ್ವಹಣೆ, ತಾಂತ್ರಿಕ ದೋಷಗಳ ಪರಿಶೀಲನೆ ನಡೆಸಲಾಗುತ್ತದೆ. ಆದರೆ ಭದ್ರಾ ಜಲಾಶಯದಲ್ಲಿ ಅಧಿಕಾರಿಗಳು ಮಳೆ ಶುರುವಾಗಿ, ಒಳ ಹರಿವು ಆರಂಭವಾದ ಮೇಲೆ ನಿರ್ಹವಣೆ ಆರಂಭಿಸಿದ್ದರು. ಈ ವೇಳೆ ರಿವರ್ ಗೇಟ್ನಲ್ಲಿ (ಸ್ಲೂಯಿಸ್ ಗೇಟ್) ತಾಂತ್ರಿಕ ಸಮಸ್ಯೆ ಉಂಟಾಗಿ ಮುಚ್ಚಲಾಗದ ಸ್ಥಿತಿಗೆ ತಲುಪಿತ್ತು. ಇದರಿಂದ ಜಲಾಶಯದಲ್ಲಿ ಸಂಗ್ರಹವಾಗಿದ್ದ ನೀರು ಅನಾಯಾಸವಾಗಿ ಹೊಳೆಗೆ ಹರಿದು ಹೋಗುತ್ತಿತ್ತು.

ವಿಚಾರ ತಿಳಿಯುತ್ತಲೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಕೆ.ಪಿ.ಅಂಶುಕುಮಾರ್ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅಚ್ಚುಕಟ್ಟು ಭಾಗದ ರೈತರು ಕೂಡ ಡ್ಯಾಂಗೆ ಬಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು.
ಇದನ್ನೂ ಓದಿ – ಶಿವಮೊಗ್ಗ ವಕೀಲರ ಸಂಘಕ್ಕೆ ನೂತನ ಅಧ್ಯಕ್ಷ, ಪದಾಧಿಕಾರಿಗಳು, ಯಾರೆಲ್ಲ ಗೆದ್ದಿದ್ದಾರೆ? ಎಷ್ಟು ಮತ ಪಡೆದಿದ್ದಾರೆ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






