ಭದ್ರಾವತಿ: ಭದ್ರಾ ಎಡದಂಡೆ ನಾಲೆಗೆ ಹೊಸ ಗೇಟ್ (Gate) ಅಳವಡಿಸಲು ಇನ್ನೂ ಒಂದೂವರೆ ತಿಂಗಳು ಕಾಲವಕಾಶ ಬೇಕಿದೆ. ಆದ್ದರಿಂದ ಮುಂಗಾರು ಹಂಗಾಮಿನಲ್ಲಿ ನಾಲೆಗೆ ನೀರು ಹರಿಸಲು ಸಾಧ್ಯವಿಲ್ಲ. ಎಡದಂಡೆ ನಾಲೆ ವ್ಯಾಪ್ತಿಯ ರೈತರು ಮುಂಗಾರು ಭತ್ತ ಸೇರಿದಂತೆ ಹೆಚ್ಚು ನೀರು ಅವಲಂಬಿಸುವ ಬೆಳೆ ಬೆಳೆಯದಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಹೊಸ ಗೇಟ್ ಅಳವಡಿಸಬೇಕಿದೆ. ಕಾರ್ಯಪಾಲಕ ಇಂಜಿನಿಯರ್ ವರದಿಯಂತೆ ಗೇಟ್ ಅಳವಡಿಕೆಗೆ ಅಂದಾಜು ಒಂದೂವರೆ ತಿಂಗಳು ಕಾಲಾವಕಾಶ ಬೇಕು. ಹಾಗಾಗಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಎಡದಂಡೆ ನಾಲೆಗೆ ನೀರು ಹರಿಸಲು ಸಾಧ್ಯವಾಗುವುದಿಲ್ಲ.
ಭದ್ರಾ ಜಲಾಶಯದ ಎಡದಂಡೆ ನಾಲೆಯ ವ್ಯಾಪ್ತಿಗೆ ಒಳಪಡುವ ರೈತರು ಈ ನಾಲೆಯ ನೀರನ್ನು ಅವಲಂಬಿಸಿ ಭತ್ತ ಅಥವಾ ಇನ್ಯಾವುದೇ ಹೆಚ್ಚು ನೀರು ಅವಲಂಬಿತ ಬೆಳೆಗಳನ್ನು ಬೆಳೆಯಬಾರದು. ಒಂದು ವೇಳೆ ಬೆಳೆಗಳನ್ನು ಬೆಳೆದು ನಾಲೆಯಿಂದ ನೀರು ಸಿಗದೆ ಬೆಳೆ ನಷ್ಟವಾದಲ್ಲಿ ನೀರಾವರಿ ಇಲಾಖೆ ಜವಾವಾಬ್ದಾರಿಯಲ್ಲ ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ಆಗುಂಬೆ ಘಾಟಿ ಸಮೀಪ ಧರೆಗುರುಳಿದ ಮರ, ಕೆಲಕಾಲ ಹೆದ್ದಾರಿ ಬಂದ್

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200