ಭದ್ರಾವತಿ ನಗರ ಕಾಂಗ್ರೆಸ್‌ಗೆ ಎಸ್‌.ಕುಮಾರ್‌ ಸಾರಥ್ಯ, ಪಕ್ಷ ಸಂಘಟನೆ ಕುರಿತು ಹೇಳಿದ್ದೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE | 31 JULY 2023

BHADRAVATHI : ನಗರದಲ್ಲಿ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸಿ, ಮುಂದಿನ ಚುನಾವಣೆಗಳಲ್ಲಿ ಉತ್ತಮ ಸಾಧನೆ ಮಾಡಲಾಗುತ್ತದೆ ಎಂದು ಕಾಂಗ್ರೆಸ್‌ ಪಕ್ಷದ (Congress Party) ನಗರ ಘಟಕದ ನೂತನ ಅಧ್ಯಕ್ಷ ಎಸ್‌.ಕುಮಾರ್‌ ತಿಳಿಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

K-Kumar-is-the-new-congress-city-president-Bhadravathi.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌.ಕುಮಾರ್‌, ಮುಖಂಡರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಗರಸಭೆ ವ್ಯಾಪ್ತಿಯ 35 ವಾರ್ಡ್‌ಗಳಲ್ಲಿ ಕಾಂಗ್ರೆಸ್‌ ಪಕ್ಷವನ್ನು ಸಂಘಟನೆ ಮಾಡಲಾಗುತ್ತದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ (Congress Party) ಹೆಚ್ಚು ಮತಗಳು ಲಭಿಸಲಿದೆ. ಇದಕ್ಕಾಗಿ ಕಾರ್ಯತಂತ್ರ ಸಿದ್ಧವಾಗಿವೆ. ರಾಜ್ಯ ಸರ್ಕಾರದ ಯೋಜನೆಗಳು ಹೆಚ್ಚು ಜನರಿಗೆ ತಲುಪುವಂತೆ ಮಾಡಲಾಗುತ್ತದೆ ಎಂದರು.

ಕಾಂಗ್ರೆಸ್‌ ಪಕ್ಷದಲ್ಲಿಯೇ ಇದ್ದೆ. ರಾಜಕೀಯ ಕಾರಣಗಳಿಂದಾಗಿ ಬೇರೆ ಪಕ್ಷಗಳಿಗೆ ಹೋಗಬೇಕಾಯಿತು. ವಿಧಾನಸಭೆ ಚುನಾವಣೆ ಹೊತ್ತಿಗೆ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದೆ. ಉತ್ತಮ ಫಲಿತಾಂಶ ಲಭಿಸಿದ ಬೆನ್ನಿಗೆ ನಗರ ಘಟಕದ ಅಧ್ಯಕ್ಷ ಜವಾಬ್ದಾರಿ ನೀಡಲಾಗಿದೆ. ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯಾದ್ಯಕ್ಷ ಡಿ.ಕೆ.ಶಿವಕುಮಾರ್‌, ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕ ಸಂಗಮೇಶ್ವರ್‌ ಅವರಿಗೆ ಧನ್ಯವಾದ ತಿಳಿಸುತ್ತೇನೆ.ಎಸ್‌.ಕುಮಾರ್‌, ಭದ್ರಾವತಿ ಕಾಂಗ್ರೆಸ್‌ ನಗರ ಅಧ್ಯಕ್ಷ

ಇದನ್ನೂ ಓದಿ – GOOD NEWS | ಬೆಂಗಳೂರು – ಶಿವಮೊಗ್ಗ ವಿಮಾನದ ಟಿಕೆಟ್‌ ರೇಟ್‌ ಇಳಿಕೆ, ಈವರೆಗೂ ಎಷ್ಟಾಗಿದೆ ಬುಕಿಂಗ್‌?

ಗ್ರಾಮಾಂತರ ಬ್ಲಾಕ್‌ ಕಾಂಗ್ರೆಸ್‌ನ ಅಧ್ಯಕ್ಷ ಹೆಚ್‌.ಎಲ್.ಷಡಾಕ್ಷರಿ, ನಗರಸಭೆ ಅಧ್ಯಕ್ಷೆ ಶೃತಿ ವಸಂತ ಕುಮಾರ್‌, ಉಪಾಧ್ಯಕ್ಷೆ ಸರ್ವಮಂಗಳಾ ಭೈರಪ್ಪ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.

PARISHRAMA NEET ACADEMY

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment