ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಜಾತಿ ನಿಂದನೆ ಮಾಡಿ, ಜೀವ ಬೆದರಿಕೆ ಹಾಕಿದ್ದ ಪ್ರಕರಣದ ಆರು ಮಂದಿ ಆರೋಪಿಗಳಿಗೆ ಭದ್ರಾವತಿಯ ನ್ಯಾಯಾಲಯವು (court) ತಲಾ ಎರಡು ವರ್ಷಗಳ ಕಠಿಣ ಕಾರಾವಾಸ ಹಾಗೂ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

2020ರಜುಲೈ 28 ರಂದು ಲಕ್ಷ್ಮೀಪುರ ಗ್ರಾಮದ ಜಮೀನಿನಲ್ಲಿ ವ್ಯಕ್ತಿಯೊಬ್ಬರು ಕೆಲಸ ಮಾಡುತ್ತಿದ್ದಾಗ, ಗೌತಮಿ (30), ನಾಗರಾಜ (56), ರಾಘವೇಂದ್ರ (35), ನಾಗರತ್ನ (54), ಲಕ್ಷ್ಮಮ್ಮ (40) ಹಾಗೂ ದೇವರಾಜ (28) ಎಂಬುವವರು ಬಂದು ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ಬೈದಿದ್ದರು. ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿತ್ತು.

BHADRAVATHI-NEWS-UPDATE

ಈ ಕುರಿತು ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅಂದಿನ ಡಿವೈಎಸ್ಪಿ ಸುಧಾಕರ್ ಎಸ್. ನಾಯ್ಕ್ ಅವರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.

Bhadravathi News Graphics
knief assault

ವಿಚಾರಣೆ ನಡೆಸಿದ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು, ಆರೋಪಿಗಳ ಮೇಲಿನ ಸಾಕ್ಷ್ಯಾಧಾರಗಳು ದೃಢಪಟ್ಟಿವೆ. ಈ ಹಿನ್ನೆಲೆ ನ್ಯಾ.ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಅವರು ತೀರ್ಪು ಪ್ರಕಟಿಸಿದ್ದಾರೆ. ಆರು ಆರೋಪಿಗಳಿಗೆ ತಲಾ 2 ವರ್ಷ ಕಠಿಣ ಕಾರಾವಾಸ ಶಿಕ್ಷೆ ವಿಧಿಸಲಾಗಿದೆ. ಒಟ್ಟು 1,74,000/- ರೂಪಾಯಿ ದಂಡ ವಿಧಿಸಿ ಆದೇಶಿಸಲಾಗಿದೆ.

ಇದನ್ನೂ ಓದಿ – ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ರತ್ನಮ್ಮ.ಪಿ ಅವರು ವಾದ ಮಂಡಿಸಿದ್ದರು ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Sunrise Facility Services, Sri sai Trust Shimoga

Leave a Comment