ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಟೆಲಿಗ್ರಾಂ ಆ್ಯಪ್ ಮೂಲಕ ಹಣ ಹೂಡಿಕೆ ಮಾಡಿ ಹೆಚ್ಚಿನ ಲಾಭ ಗಳಿಸುವ ಆಮಿಷವೊಡ್ಡಿ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಭದ್ರಾವತಿಯ (Bhadravathi)ವ್ಯಕ್ತಿಯೊಬ್ಬರು ಟೆಲಿಗ್ರಾಂನಲ್ಲಿ ಜಾಹೀರಾತು ನೋಡಿ ಲಿಂಕ್ ಕ್ಲಿಕ್ ಮಾಡಿ ಮೋಸ ಹೋಗಿದ್ದಾರೆ.
ಹೇಗಾಯ್ತು ಮೋಸ?
ಟೆಲಿಗ್ರಾಂನಲ್ಲಿ ಲಿಂಕ್ ಕ್ಲಿಕ್ ಮಾಡಿದಾಗ, ಮಧುಮಿತಾ ಎಂಬ ಹೆಸರಿನ ಗ್ರೂಪ್ ಅಡ್ಮಿನ್ ಇವರನ್ನು ಸಂಪರ್ಕಿಸಿದ್ದಾರೆ. ತಾವು ಟಾಟಾ ಕಂಪನಿಯ ಪ್ರತಿನಿಧಿಗಳು ಎಂದು ತಿಳಿಸಿದ್ದಾರೆ. ಫ್ಯಾಷನ್ ಡಿಸೈನಿಂಗ್ ಉತ್ಪನ್ನಗಳನ್ನು ಖರೀದಿಸಿ ಟಾಸ್ಕ್ ಪೂರ್ಣಗೊಳಿಸಿದರೆ ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿದ್ದಾರೆ.
ಇದನ್ನು ನಂಬಿದ ಭದ್ರಾವತಿಯ ವ್ಯಕ್ತಿ ಹಂತ ಹಂತವಾಗಿ ಹಣ ಹೂಡಿಕೆ ಮಾಡಿದ್ದಾರೆ. ಡಿಸೆಂಬರ್ 18 ರಿಂದ ಡಿಸೆಂಬರ್ 25 ರ ಅವಧಿಯಲ್ಲಿ ಒಟ್ಟು ₹6,23,155 ವರ್ಗಾಯಿಸಿದ್ದಾರೆ. ತಾವು ಹೂಡಿಕೆ ಮಾಡಿದ ಹಣ ಮತ್ತು ಲಾಭ ವಾಪಸ್ ಬಾರದೇ ಇದ್ದಾಗ ತಾವು ಮೋಸ ಹೋಗಿರುವುದು ಅವರಿಗೆ ಅರಿವಾಗಿದೆ. ಘಟನೆ ಸಂಬಂಧ ಶಿವಮೊಗ್ಗ ಸಿಇಎನ್ (CEN) ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಇದನ್ನೂ ಓದಿ » ಉದ್ಯಮಿಗಳೇ ಹುಷಾರ್, ಶಿವಮೊಗ್ಗ ಜಿಲ್ಲೆಯ ಡಾಂಬಾರು ವ್ಯಾಪಾರಿಗೆ ಲಕ್ಷ ಲಕ್ಷ ಮೋಸ, ಆಗಿದ್ದೇನು?
LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






