ಶಿವಮೊಗ್ಗ ಲೈವ್.ಕಾಂ | BHADRAVATHI NEWS | 24 ಜೂನ್ 2020
ಮುಂಬೈಗೆ ಹೋಗಿ ಭದ್ರಾವತಿಗೆ ಹಿಂತಿರುಗಿದ್ದ ಮಹಿಳೆಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಭದ್ರಾವತಿಯ ಮತ್ತೊಂದು ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ.
ಬಾಣಂತನ ಮಾಡಲು ಹೋಗಿದ್ದರು
ಸಹೋದರಿಯ ಬಾಣಂತನ ಮಾಡಲು ಈ ಮಹಿಳೆ ಮುಂಬೈಗೆ ತೆರಳಿದ್ದರು. ಜೂನ್ 18ರಂದು ಇವರು ಭದ್ರಾವತಿಗೆ ಹಿಂತಿರುಗಿದ್ದರು. ಮುಂಬೈನಿಂದ ಹಿಂತಿರುಗಿದ್ದ ಕಾರಣ ಜೂ.19ರಂದು ಸಾರ್ವಜನಿಕ ಆಸ್ಪತ್ರೆಗೆ ಹೋಗಿ, ಸ್ವಪ್ರೇರಣೆಯಿಂದ ಕರೋನ ಪರೀಕ್ಷೆಗೆ ಒಳಗಾಗಿದ್ದರು. ಮುಂಬೈನಿಂದ ಬಂದಿದ್ದರಿಂದ ಇವರನ್ನು ವೈದ್ಯರು ಕ್ವಾರಂಟೈನ್ನಲ್ಲಿ ಇರಿಸಿದ್ದರು.
ಕುಟುಂಬದವರ ಮೇಲೆ ನಿಗಾ
ಸೋಂಕಿತ ಮಹಿಳೆ ಜೊತೆಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಕುಟುಂಬದವರ ಮೇಲೆ ನಿಗಾ ವಹಿಸಲಾಗಿದೆ. ಅವರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಪತಿಯನ್ನು ಮಾತ್ರ ಪ್ರಾಥಮಿಕ ಸಂಪರ್ಕ ಎಂದು ಗುರುತಿಸಲಾಗಿದೆ.

ಏರಿಯಾ ಸೀಲ್ ಡೌನ್
ಮಹಿಳೆಗೆ ಕರೋನ ಕಾಣಿಸಿಕೊಂಡ ಹಿನ್ನೆಲೆ ಕಾಗದ ನಗರದಲ್ಲಿ ಮಹಿಳೆಯ ಮನೆ ಇರುವ ಕ್ರಾಸ್ ಅನ್ನು ಸೀಲ್ ಡೌನ್ ಮಾಡಲಾಗಿದೆ. ಈ ರಸ್ತೆಯಲ್ಲಿ ಜನ ಸಂಚಾರ ನಿರ್ಬಂಧಿಸಲಾಗಿದ್ದು, ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ. ಕಂಟೈನ್ಮೆಂಟ್ ಜೋನ್ಗೆ ಉಪ ವಿಭಾಗಾಧಿಕಾರಿ ಪ್ರಕಾಶ್, ತಹಶೀಲ್ದಾರ್ ಶಿವಕುಮಾರ್, ನಗರ ಸಭೆ ಪೌರಾಯುಕ್ತ ಮನೋಹರ್, ಪರಿಸರ ಎಂಜಿನಿಯರ್ ರುದ್ರೇಗೌಡ, ಟಿಹೆಚ್ಓ ಡಾ.ಎಂ.ಆರ್.ಗಾಯತ್ರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200