ಶಿವಮೊಗ್ಗ ಲೈವ್.ಕಾಂ | BHADRAVATHI NEWS | 16 ಜುಲೈ 2021
ತೂಕದಲ್ಲಿ ವಂಚನೆ ಮಾಡಿದ ಆರೋಪದ ಮೇಲೆ ನ್ಯಾಯಬೆಲೆ ಅಂಗಡಿಯೊಂದರ ಪರವಾನಗಿಯನ್ನೆ ರದ್ದುಗೊಳಿಸಲಾಗಿದೆ. ಜಿಲ್ಲಾಧಿಕಾರಿ ಅವರ ಸೂಚನೆ ಮೇರೆಗೆ ಪಡಿತರ ಇಲಾಖೆ ಜಿಲ್ಲಾ ಜಂಟಿ ನಿರ್ದೇಶಕರು ಈ ಕ್ರಮ ಕೈಗೊಂಡಿದ್ದಾರೆ.
![]() |
ಭದ್ರಾವತಿಯ ಜಿಂಕ್ಲೈನ್ನಲ್ಲಿರುವ ಕಾಮಧೇನು ನ್ಯಾಯಬೆಲೆ ಅಂಗಡಿಯನ ಪರವಾನಗಿ ಅಮಾನತು ಮಾಡಲಾಗಿದೆ.
ನಗರಸಭೆ ವ್ಯಾಪ್ತಿಯ 31ನೇ ವಾರ್ಡಿಗೆ ಸೇರಿದ ನ್ಯಾಯ ಬೆಲೆ ಅಂಗಡಿ ವಿರುದ್ಧ ದೂರು ಬಂದ ಹಿನ್ನೆಲೆಯಲ್ಲಿ ಮಾಪನ ಶಾಸ್ತ್ರ ನಿರೀಕ್ಷಕರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ನ್ಯಾಯ ಬೆಲೆ ಅಂಗಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು.
ಇದೇ ಸಮಯದಲ್ಲಿ ಪಡಿತರ ಚೀಟಿಯೊಂದಕ್ಕೆ ಅಕ್ಕಿ ವಿತರಿಸಲಾಗಿತ್ತು. ಅಧಿಕಾರಿಗಳು ಇದನ್ನು ಪರಿಶೀಲಿಸಿದಾಗ 3 ಕೆಜಿ ಅಕ್ಕಿ ಕಡಿಮೆ ಇರುವುದು ಕಂಡು ಬಂದಿತ್ತು. ತೂಕದಲ್ಲಿ ಮೋಸವಾಗುತ್ತಿರುವುದು ಸಾಬೀತಾಗಿ ವಿಶೇಷ ತಂಡವು ಜಿಲ್ಲಾಧಿಕಾರಿಗಳಿಗೆ ನೀಡಿದ ವರದಿ ಆಧರಿಸಿ ಆಹಾರ ಮತ್ತು ಪಡಿತರ ಇಲಾಖೆಯ ಜಂಟಿ ನಿರ್ದೇಶಕ. ಡಾ. ಬಿ.ಟಿ. ಮಂಜುನಾಥ್ ನ್ಯಾಯಬೆಲೆ ಅಂಗಡಿ ಯನ್ನು ಅಮಾನತುಗೊಳಿಸಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200