ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MAY 2021
ಕರೋನ ಈಗ ಹಳ್ಳಿ ಹಳ್ಳಿಗೂ ವ್ಯಾಪಿಸಿದೆ. ಸಾವು, ನೋವು ಉಂಟು ಮಾಡುತ್ತಿದೆ. ಇದು ಜನರಲ್ಲಿ ಭೀತಿ ಹೆಚ್ಚಿಸಿದೆ. ಈ ನಡುವೆ ಕರೋನ ತಡೆಗೆ ಹಲವು ಕಡೆ ಸೀಲ್ ಡೌನ್ ಮಾಡಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಭದ್ರಾವತಿ ತಾಲೂಕಿನ ಗ್ರಾಮೀಣ ಭಾಗದಲ್ಲಿ 400ಕ್ಕೂ ಹೆಚ್ಚು ಸಕ್ರಿಯ ಕರೋನ ಪ್ರಕರಣಗಳಿವೆ. ಇದು ಜಿಲ್ಲಾಡಳಿತಕ್ಕೆ ತಲೆನೋವು ತಂದಿದೆ. ಗ್ರಾಮೀಣ ಭಾಗದಲ್ಲಿ ಸೋಂಕು ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸಲು ಇನ್ನಿಲ್ಲದ ಕ್ರಮ ಕೈಗೊಳ್ಳಲಾಗುತ್ತಿದೆ.
ಯಾವ್ಯಾವ ಹಳ್ಳಿಯಲ್ಲಿ ಎಷ್ಟಿದೆ ಕೇಸ್?
ಭದ್ರಾವತಿ ತಾಲೂಕಿನ ಅಂತರಗಂಗೆ ವ್ಯಾಪ್ತಿಯಲ್ಲಿ 40ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಕೂಡ್ಲಿಗೆರೆ ವ್ಯಾಪ್ತಿಯಲ್ಲಿ 30ಕ್ಕೂ ಹೆಚ್ಚು ಪ್ರಕರಣಗಳಿವೆ.
ಅರೆಬಿಳಚಿ, ಹಿರಿಯೂರು ವ್ಯಾಪ್ತಿಯಲ್ಲಿ 20ಕ್ಕಿಂತಲೂ ಹೆಚ್ಚು ಪ್ರಕರಣಗಳು ಇದೆ. ಆನವೇರಿ, ಅರಳಿಕೊಪ್ಪ, ಬಾರಂದೂರು, ದೊಡ್ಡೇರಿ, ದೊಣಬಘಟ್ಟ, ಹೊಳೆಹೊನ್ನೂರು, ಕಲ್ಲಿಹಾಳ್, ಕೋಮಾರನಹಳ್ಳಿ, ನಾಗತಿಬೆಳಗಲು, ಸಿಂಗನಮನೆ, ತಾವರಘಟ್ಟ, ವೀರಾಪುರ, ಯರೇಹಳ್ಳಿ ವ್ಯಾಪ್ತಿಯಲ್ಲಿ ಹತ್ತಕ್ಕಿಂತಲೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ.
ಅಗರದಹಳ್ಳಿ, ಅರಹತೊಳಲು, ಅರಕೆರೆ, ಅರಳಿಹಳ್ಳಿ, ಅತ್ತಿಗುಂದ, ಬಿಳಕಿ, ದಾಸರಕಲ್ಲಹಳ್ಳಿ, ಎಮ್ಮೆಹಟ್ಟಿ, ಗುಡುಮಘಟ್ಟ, ಹನುಮಂತಾಪುರ, ಕಾಗೆಕೊಡುಮಗ್ಗೆ, ಕಲ್ಲಹಳ್ಳಿ, ಕಂಬದಾಳು ಹೊಸೂರು, ಕಾರೇಹಳ್ಳಿ, ಮಂಗೋಟೆ, ಮಾರಶೆಟ್ಟಿಹಳ್ಳಿ, ಮಾವಿನಕೆರೆ, ಮೈದೊಳಲು, ನಿಂಬೆಗೊಂದಿ, ಸನ್ಯಾಸಿಕೊಡುಮಗ್ಗೆ, ಸಿದ್ಲಿಪುರ, ಸೈದರಕಲ್ಲಹಳ್ಳಿ, ತಡಸ, ಯಡೇಹಳ್ಳಿ ವ್ಯಾಪ್ತಿಯಲ್ಲಿ ಹತ್ತಕ್ಕಿಂತಲೂ ಕಡಿಮೆ ಸಕ್ರಿಯ ಪ್ರಕರಣಗಳಿವೆ.
ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]