ಭದ್ರಾ ಜಲಾಶಯದ ಬಳಿ ಪ್ರವಾಸಿಗರ ವಾಹನ ಬೆನ್ನಟ್ಟಿದ ಕಾಡಾನೆ, ಆಗಿದ್ದೇನು?

 ಶಿವಮೊಗ್ಗ  LIVE 

ಭದ್ರಾವತಿ: ಸಮೀಪದ ಭದ್ರಾ ಜಲಾಶಯ ಸಮೀಪದ ಬಾವಿಕೆರೆ ಸಸ್ಯ ಕ್ಷೇತ್ರ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಿಗ್ಗೆ ಕಾಡಾನೆಯೊಂದು, ಪ್ರವಾಸಿಗರಿದ್ದ ವಾಹನವೊಂದನ್ನು ಬೆನ್ನಟ್ಟಿದೆ.

ಇದನ್ನೂ ಓದಿ » ಶಿವಮೊಗ್ಗಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ, VISLನಲ್ಲಿ ನಡೆಯಲಿದೆ ಮಹತ್ವದ ಮೀಟಿಂಗ್‌

Sigandur-Janthre-2026-scaled.

ಭದ್ರಾ ಜಲಾಶಯದ ಬಳಿಯ ಜಂಗಲ್ ರೆಸಾರ್ಟ್‌ನಲ್ಲಿ ತಂಗಿದ್ದ ವಿದೇಶಿ ಪ್ರವಾಸಿಗರನ್ನು ಅರಣ್ಯ ಇಲಾಖೆ ಸಿಬ್ಬಂದಿ, ತಮ್ಮ ವಾಹನದಲ್ಲಿ ಭದ್ರಾ ಅಭಯಾರಣ್ಯ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ವೀಕ್ಷಣೆಗೆ ಕರೆದೊಕೊಂಡು ಹೋಗಿದ್ದರು.

Wild-Elephant-Chase-Tourist-vehicle-near-bhadra-dam.

ಈ ವೇಳೆ ರಂಗನಾಥಸ್ವಾಮಿ ದೇವಸ್ಥಾನದ ಸಮೀಪ ಕಾಡಾನೆಯೊಂದು ಕಂಡಿತ್ತು. ಅದು ಏಕಾಏಕಿ ತಮ್ಮತ್ತ ಓಡಿ ಬಂದಿದ್ದರಿಂದ ಗಾಬರಿಗೊಂಡ ಸಿಬ್ಬಂದಿ ವಾಹನವನ್ನು ವೇಗವಾಗಿ ಚಲಾಯಿಸಿಕೊಂಡು ಹೋದರು. ಸ್ವಲ್ಪ ದೂರ ವಾಹನದ ಹಿಂದೆಯೇ ಹೋದ ಕಾಡಾನೆ ನಂತರ ಮತ್ತೊಂದು ರಸ್ತೆ ಮೂಲಕ ಅರಣ್ಯದೊಳಗೆ ಹೋಯಿತು ಎಂದು ಹೇಳಲಾಗಿದೆ. ಈ ಕುರಿತ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

ಇದನ್ನೂ ಓದಿ » ಅಡಿಕೆ ಧಾರಣೆ | 28 ನವೆಂಬರ್‌ 2025 | ಇವತ್ತು ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಿಕೆ ರೇಟ್?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment