SHIVAMOGGA LIVE NEWS | 19 MAY 2023
BHADRAVATHI : ಭಾವಸಾರ ಕ್ಷತ್ರಿಯ ಸಮಾಜದ ವತಿಯಿಂದ ದಿಂಡಿ ಉತ್ಸವ ಅಂಗವಾಗಿ ಭದ್ರಾವತಿ ಪಟ್ಟಣದಲ್ಲಿ ರಾಜಬೀದಿ ಮೆರವಣಿಗೆ (Procession) ನಡೆಯಿತು. ಸಮಾಜದವರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಶ್ರೀ ಕೃಷ್ಣ ರುಕ್ಮಿಣಿಯರ ಉತ್ಸವ ಮೂರ್ತಿಯನ್ನು ಪುಷ್ಪಾಲಂಕಾರದ ವಾಹನದಲ್ಲಿ ಇರಿಸಿ ನಗರದ ಪ್ರಮುಖ ಬೀದಿಗಳಲ್ಲಿ ಮೆರಣಿಗೆ ನಡೆಸಲಾಯಿತು. ವಾದ್ಯ ತಂಡಗಳೊಂದಿಗೆ ದೇವರ ನಾಮ ಜಪಿಸುತ್ತ ಭಕ್ತರು ಹೆಜ್ಜೆ ಹಾಕಿದರು. ನಂತರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ನಡೆಸಲಾಯಿತು.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಮೂವರು ಶಾಸಕರ ಪೈಕಿ ಯಾರಾಗ್ತಾರೆ ಮಿನಿಸ್ಟರ್?
ಮೂರು ದಿನ ದಿಂಡಿ ಉತ್ಸವ ಆಯೋಜಿಸಲಾಗಿತ್ತು. ಮೇ 16ರಂದು ಭೂತನಗುಡಿಯ ಕೃಷ್ಣ ರುಕ್ಮಿಣಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಪೋತಿ ಸ್ಥಾಪನೆ. ಮೇ 17ರಂದು ಅಖಂಡ ಜಾಗರಣೆ, ಪ್ರವಚನ ಕಾರ್ಯಕ್ರಮ ಜರುಗಿತು. ಮೂರನೆ ದಿನ ವೈಭವದ ರಾಜಬೀದಿ ಮೆರವಣಿಗೆ (Procession) ನಡೆಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿತು.
ಇದನ್ನೂ ಓದಿ – ಪ್ರಥಮ ಪಿಯುಸಿಗೆ ಉಚಿತ ಪ್ರವೇಶಾತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಮಾನದಂಡವೇನು?
ಪ್ರಮುಖರಾದ ಡಿ.ಕೆ.ರಾಘವೇಂದ್ರ ರಾವ್ ಡೋಯಿಜೋಡೆ, ಟಿ.ಎಸ್.ಭವಾನಿ ಕುಮಾರ್ ತೇಲ್ಕರ್, ಟಿ.ಎಂ.ವಿಠಲನಾಥ ತೇಲ್ಕರ್, ರಾಘವೇಂದ್ರ, ಶ್ರೀದರ್ ರಾವ್, ನಾರಾಯಣ ರಾವ್, ಮಂಜುಳಾ, ಪ್ರತಿಮಾ, ಮೈಲಾರಿ ರಾವ್, ಸ್ವಪ್ನಾ ಕುಮಾರ್, ಜಗನ್ನಾಥ ಸೇರಿದಂತೆ ಹಲವರು ಇದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200