SHIVAMOGGA LIVE NEWS | 19 APRIL 2024
HOLEHONNURU : ಮುಂದೆ ಹೋಗುತ್ತಿದ್ದ ಬೈಕ್ಗೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ, ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಯುವಕರಿಬ್ಬರು ಸ್ಥಳದಲ್ಲೆ ಸಾವನಪ್ಪಿದ್ದಾರೆ. ತೀರ್ಥಹಳ್ಳಿಯ ಹೆಚ್.ಆರ್ ಧನುಷ್ (24) ಮತ್ತು ಆತನ ಸ್ನೇಹಿತ ಮೃತಪಟ್ಟಿದ್ದಾರೆ. ಆತನ ಹೆಸರು ತಿಳಿದುಬಂದಿಲ್ಲ. ಆಗರದಹಳ್ಳಿ ಕ್ರಾಸ್ನಲ್ಲಿ ಗುರುವಾರ ಘಟನೆ ಸಂಭವಿಸಿದೆ. ಚಿತ್ರದುರ್ಗದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಅಪಘಾತ ಸಂಭವಿಸಿದೆ. ಮುಂಬದಿ ತೆರಳುತ್ತಿದ್ದ ಬೈಕ್ ಏಕಾಏಕಿ ತಿರುವು ಪಡೆದಿದ್ದರಿಂದ ಹಿಂಬದಿಯ ಬೈಕ್ ಸವಾರರು ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸಾವನಪ್ಪಿದ್ದಾರೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಗಾಳಿ, ಮಳೆ, ತೀರ್ಥಹಳ್ಳಿಯಲ್ಲಿ ವ್ಯಕ್ತಿ ಸಾವು, ಆನಂದಪುರ, ಆಗುಂಬೆ ಸೇರಿ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200