ಕಲ್ಯಾಣ ಮಂಟಪದ ಮುಂದೆ ನಿಲ್ಲಿಸಿದ್ದ ಬೈಕ್‌ ನಾಪತ್ತೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS

ಹೊಳೆಹೊನ್ನೂರು: ಬಿ. ಬೀರನಹಳ್ಳಿಯ ಕಲ್ಯಾಣ ಮಂಟಪವೊಂದರ ಎದುರು ನಿಲ್ಲಿಸಲಾಗಿದ್ದ ಬೈಕ್ ಕಳ್ಳತನ ಮಾಡಲಾಗಿದೆ.

➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಫೈಜಾನ್‌ ಉಲ್ಲಾ ಎಂಬುವವರು ಬಿ. ಬೀರನಹಳ್ಳಿಯ ಮಾಜ್ ಕಲ್ಯಾಣ ಮಂಟಪದ ಮುಂಭಾಗ ತಮ್ಮ ಬೈಕನ್ನು ನಿಲ್ಲಿಸಿ ಹೋಗಿದ್ದರು. ರಾತ್ರಿ ವಾಪಸ್ ಬಂದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ಕಳುವಾದ ಬೈಕಿನ ಅಂದಾಜು ಮೌಲ್ಯ ₹40,000 ಎಂದು ತಿಳಿಸಲಾಗಿದೆ. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

bike theft reference image