ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 27 DECEMBER 2020
ಶಿವಮೊಗ್ಗದಲ್ಲಿ ನಡೆಯುತ್ತಿರುವ ವಿಶೇಷ ಕಾರ್ಯಕಾರಣಿ ಸಭೆಯಿಂದಾಗಿ ಜಿಲ್ಲೆಯ ಏಳು ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲು ಪ್ರೇರಣೆ ಆಗಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟಿ.ಡಿ.ಮೇಘರಾಜ್, ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಅವರ ನೇತೃತ್ವದಲ್ಲಿ ಇಂಥದ್ದೇ ಸಭೆ ಶಿವಮೊಗ್ಗದಲ್ಲಿ ನಡೆದಿತ್ತು. ಆ ಬಳಿಕ ದೇಶದಲ್ಲಿ ಮತ್ತು ಕರ್ನಾಟಕ ಬಿಜೆಪಿ ಮತ್ತಷ್ಟು ಬಲಿಷ್ಟವಾಯಿತು. ಈಗ ಮತ್ತೊಂದು ಸಭೆ ನಡೆಯುತ್ತಿದೆ. ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಿದಂತೆ ಆಗಲಿದೆ. ಇದರಿಂದ ಮುಂದೆ ಬರಲಿರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ನಗರಸಭೆ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ಸಾಧಿಸಲಿದೆ. ಈ ಮೂಲಕ ಏಳಕ್ಕೆ ಏಳು ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿಎಂ ಯಡಿಯೂರಪ್ಪಗೆ ಸನ್ಮಾನ
ಜನವರಿ 2 ಮತ್ತು 3ರಂದು ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕಾರಣಿ ಸಭೆ ನಡೆಯಲಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಗೋ ಹತ್ಯೆ ನಿಷೇಧ ಕಾನೂನು ಜಾರಿ ಮಾಡಿರುವುದರಿಂದ ಸಿಎಂ ಯಡಿಯೂರಪ್ಪ ಅವರನ್ನು ಸನ್ಮಾನಿಸಲಾಗುತ್ತದೆ ಎಂದು ತಿಳಿಸಿದರು.
ಒಳ ಚರಂಡಿ ಮತ್ತು ನೀರು ಸರಬರಾಜು ಮಂಡಳಿ ಅಧ್ಯಕ್ಷ ಮಂಗೋಟೆ ರುದ್ರೇಶ್, ಸೂಡಾ ಸದಸ್ಯ ಕದಿರೇಶ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಧರ್ಮಪ್ರಸಾದ್, ಶ್ರೀನಾಥ್, ತಾಲೂಕು ಬಿಜೆಪಿ ಅಧ್ಯಕ್ಷ ಪ್ರಭಾಕರ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






