SHIVAMOGGA LIVE NEWS, 5 DECEMBER 2024
ಭದ್ರಾವತಿ : ಮನೆಯೊಂದರ ಮುಂಭಾಗ ಕಿಡಿಗೇಡಿಗಳು ವಾಮಾಚಾರ (Black Magic) ನಡೆಸಿರುವ ಶಂಕೆ ವ್ಯಕ್ತವಾಗಿದೆ. ತಾಲೂಕಿನ ಅಂತರಗಂಗೆ ಗ್ರಾಪಂ ವ್ಯಾಪ್ತಿ ರತ್ನಾಪುರ ಗ್ರಾಮದ ಮಂಜ ಎಂಬುವರ ಮನೆ ಮುಂದೆ ಮಾಟಮಂತ್ರ ಮಾಡಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮಂಜ ಅವರು ಕುಟುಂಬ ಸಮೇತ ದೇವಸ್ಥಾನಕ್ಕೆಂದು ಹೊರಜಿಲ್ಲೆಗೆ ಹೋಗಿದ್ದರು. ಮನೆಯಲ್ಲಿ ಮಕ್ಕಳಿಬ್ಬರು ಇದ್ದು, ಮಧ್ಯರಾತ್ರಿ ಅರಿಶಿಣ, ಕುಂಕುಮ ಸಹಿತ ಪೂಜೆ ಮಾಡಲಾಗಿದೆ. ಸ್ಥಳದಲ್ಲಿ ಮೊಟ್ಟೆಗಳು, ಮೀನುಗಳು, ಮಣ್ಣಿನಿಂದ ಮಾಡಿದ ಗೊಂಬೆಗಳು, ತೆಂಗಿನಕಾಯಿ, ಬಾಳೆಹಣ್ಣು, ಅರಿಶಿಣ, ಕುಂಕುಮ, ಲಿಂಬೆಹಣ್ಣು ಸೇರಿ ಮತ್ತಿತರ ಪೂಜಾ ಸಾಮಗ್ರಿ ಪತ್ತೆಯಾಗಿವೆ.
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್ ಸುದ್ದಿ