SHIVAMOGGA LIVE NEWS | BLADE | 17 ಮೇ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಮನೆಯೊಳಗೆ ಮಲಗಿದ್ದ ವ್ಯಕ್ತಿಯೊಬ್ಬರ ಕೆನ್ನೆ, ಹಣೆ, ಕುತ್ತಿಗೆಗೆ ಅಪರಿಚಿತನೊಬ್ಬ ಬ್ಲೇಡ್’ನಿಂದ (BLADE) ಇರಿದು ಪರಾರಿಯಾಗಿದ್ದಾನೆ. ಗಾಯಗೊಂಡಿದ್ದ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಭದ್ರಾವತಿ (BHADRAVATHI) ತಾಲೂಕು ರಾಮನಕೊಪ್ಪ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಯಲವಟ್ಟಿ ಗ್ರಾಮದ ಕುಮಾರನಾಯ್ಕ ಗಾಯಾಳು
ಹೇಗಾಯ್ತು ಘಟನೆ?
ಯಲವಟ್ಟಿಯ ಕುಮಾರನಾಯ್ಕ ರಾಮನಕೊಪ್ಪದಲ್ಲಿರುವ ತನ್ನ ಹೆಂಡತಿ ಮನೆಯಲ್ಲಿ ವಾಸವಿದ್ದ. ಭಾನುವಾರ ರಾತ್ರಿ 1.30ರ ಹೊತ್ತಿಗೆ ಅಪರಿಚಿತನೊಬ್ಬ ಮನೆಯೊಳಗೆ ಪ್ರವೇಶ ಮಾಡಿದ್ದಾನೆ.
ಕುಮಾರನಾಯ್ಕ ಮಲಗಿದ್ದಲ್ಲಿಗೆ ಬಳಿ ಬಂದು ಪೇಪರ್ ಕತ್ತರಿಸುವ ಸಣ್ಣ ಚಾಕುವಿನಿಂದ ಹಣೆ, ಕೆನ್ನೆ ಮತ್ತು ಕುತ್ತಿಗೆ ಮುಂಭಾಗಕ್ಕೆ ಇರಿದಿದ್ದಾನೆ. ಕುಮಾರನಾಯ್ಕ ಜೋರಾಗಿ ಕೂಗಿಕೊಂಡಿದ್ದರಿಂದ ಪತ್ನಿ ಎಚ್ಚರಗೊಂಡಿದ್ದಾರೆ. ಲೈಟ್ ಹಾಕಲು ಪತ್ನಿ ಮುಂದಾಗುತ್ತಿದ್ದಂತೆ ಆಕೆಯನ್ನು ತಳ್ಳಿ ಅಪರಿಚತನ ಪರಾರಿಯಾಗಿದ್ದಾನೆ.
ಗಾಯಗೊಂಡಿದ್ದ ಕುಮಾರನಾಯ್ಕನನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ಕೊಡಿಸಲಾಯಿತು. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






