ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 29 ಮಾರ್ಚ್ 2019
ಜನವರಿ 30ರಂದು ಟಿವಿಯಲ್ಲಿ ಯಶ್ ಅಭಿನಯನದ ಕೆಜಿಎಫ್ ಚಲನಚಿತ್ರ ಪ್ರಸಾರವಾಗುತ್ತಿದೆ. ಈ ವೇಳೆ ರಾಜಕೀಯ ಕುಮ್ಮಕ್ಕಿನಿಂದ ಕರೆಂಟ್ ತೆಗೆದರೆ ನಿಮ್ಮ ಕಚೇರಿಗೆ ಬೆಂಕಿ ಹಾಕುತ್ತೇವೆ. ನಿಮ್ಮ ಜೀವ ಹೋಗುತ್ತದೆ ಎಂದು ಪುಡಾರಿಗಳು ಕೆಇಬಿ ಹಾಗೂ ಮೆಸ್ಕಾಂ ಕಚೇರಿಗೆ ಬೆದರಿಕೆ ಪತ್ರ ಬರೆದಿದ್ದಾರೆ.


ಭದ್ರಾವತಿಯ ಕೆಇಬಿ ಕಚೇರಿಗೆ ಅಂಚೆ ಪತ್ರ ಬರೆಯಲಾಗಿದ್ದು, ಚಲನಚಿತ್ರ ಪ್ರಸಾರವಾಗುವ ಸಮಯದಲ್ಲಿ ಹೆಚ್.ಡಿ.ಕುಮಾರಸ್ವಾಮಿ, ಅಪ್ಪಾಜಿ ಕುಮ್ಮಕ್ಕಿನಿಂದ ಕರೆಂಟ್ ತೆಗೆದ್ರೆ ನಿಮ್ಮ ಆಫೀಸ್’ಗೆ ಬಾಂಬ್ ಫಿಕ್ಸ್ ಮಾಡ್ತೀವಿ ಎಂದು ಸಹ ಬೆದರಿಕೆ ಹಾಕಿದ್ದಾರೆ. ಶಿವಮೊಗ್ಗ ಕಚೇರಿಗೂ ಎಚ್ಚರಿಕೆ ನೀಡಿದ್ದೇವೆ. ಮಿಸ್ ಆಗಿ ಕರೆಂಟ್ ಹೋದರೆ ನಿಮ್ ಜೀವ ಹೋಗುತ್ತೆ. ಎಚ್ಚರಿಕೆ, ಇದರಲ್ಲಿ ರಾಜಕೀಯ ಬೇಡ ಎಂದು ಸಹ ಉಲ್ಲೇಖಿಸಿದ್ದಾರೆ. ಕೊನೆಯ ಸಾಲಿನಲ್ಲಿ ಪ್ರಜ್ಞಾ ನಾಗರಿಕರು, ಬಿಜೆಪಿ ಕಾರ್ಯಕರ್ತರು ಎಂದು ಸಹ ಇದೆ.
ಇನ್ನು, ಅನಾಮಧೇಯ ಪತ್ರ ಬಂದಿರುವ ಕುರಿತು, ಮೆಸ್ಕಾಂ ಎಇಇ ಸುರೇಶ್ ಅವರನ್ನು ಶಿವಮೊಗ್ಗ ಲೈವ್.ಕಾಂ ಸಂಪರ್ಕಿಸಿದಾಗ, ಗುರುವಾರವೇ ಈ ಸಂಬಂಧ ದೂರು ನೀಡಲು ಜಿಲ್ಲಾ ರಕ್ಷಣಾಧಿಕಾರಿ ಅವರನ್ನು ಸಂಪರ್ಕಿಸಿದೆವು. ಅವರು ಬ್ಯುಸಿ ಇದ್ದ ಕಾರಣ ಆಗಲಿಲ್ಲ. ಶುಕ್ರವಾರ ದೂರು ಸಲ್ಲಿಸಲಾಗುವುದು ಎಂದು ತಿಳಿಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು















