ಭದ್ರಾವತಿ ಮೆಸ್ಕಾಂಗೆ ಬಿಜೆಪಿ ಕಾರ್ಯಕರ್ತ ಅಂತಾ ಪತ್ರ, ಜ.30ರಂದು ಬಾಂಬ್ ಇಡ್ತೀವಿ ಅಂತಾ ಬೆದರಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 29 ಮಾರ್ಚ್ 2019

ಜನವರಿ 30ರಂದು ಟಿವಿಯಲ್ಲಿ ಯಶ್ ಅಭಿನಯನದ ಕೆಜಿಎಫ್ ಚಲನಚಿತ್ರ ಪ್ರಸಾರವಾಗುತ್ತಿದೆ. ಈ ವೇಳೆ ರಾಜಕೀಯ ಕುಮ್ಮಕ್ಕಿನಿಂದ ಕರೆಂಟ್ ತೆಗೆದರೆ ನಿಮ್ಮ ಕಚೇರಿಗೆ ಬೆಂಕಿ ಹಾಕುತ್ತೇವೆ. ನಿಮ್ಮ ಜೀವ ಹೋಗುತ್ತದೆ ಎಂದು ಪುಡಾರಿಗಳು ಕೆಇಬಿ ಹಾಗೂ ಮೆಸ್ಕಾಂ ಕಚೇರಿಗೆ ಬೆದರಿಕೆ ಪತ್ರ ಬರೆದಿದ್ದಾರೆ.

55744471 815165102178245 2414227256252563456 n.jpg? nc cat=109& nc oc=AQlpZ8AW5LqArrdlej6mUnfaCbIvuQJEH3 VtdhogfOVnFMsMsq WLfrYWVK1fkgfX5TB1lsAr0v1VgFvYPk8Ws1& nc ht=scontent.fblr1 3
55604058 815165115511577 6450649972143554560 n.jpg? nc cat=108& nc oc=AQkaHJk9fVzU853qg91NwF tVl3Up2qwoXEbStKQL39porTj15jLeU j9Bzdn8w3SSSMgjnhaiAyIlPrCwvnIPbe& nc ht=scontent.fblr1 4

ಭದ್ರಾವತಿಯ ಕೆಇಬಿ ಕಚೇರಿಗೆ ಅಂಚೆ ಪತ್ರ ಬರೆಯಲಾಗಿದ್ದು, ಚಲನಚಿತ್ರ ಪ್ರಸಾರವಾಗುವ ಸಮಯದಲ್ಲಿ ಹೆಚ್.ಡಿ.ಕುಮಾರಸ್ವಾಮಿ, ಅಪ್ಪಾಜಿ ಕುಮ್ಮಕ್ಕಿನಿಂದ ಕರೆಂಟ್ ತೆಗೆದ್ರೆ ನಿಮ್ಮ ಆಫೀಸ್’ಗೆ ಬಾಂಬ್ ಫಿಕ್ಸ್ ಮಾಡ್ತೀವಿ ಎಂದು ಸಹ ಬೆದರಿಕೆ ಹಾಕಿದ್ದಾರೆ. ಶಿವಮೊಗ್ಗ ಕಚೇರಿಗೂ ಎಚ್ಚರಿಕೆ ನೀಡಿದ್ದೇವೆ. ಮಿಸ್ ಆಗಿ ಕರೆಂಟ್ ಹೋದರೆ ನಿಮ್ ಜೀವ ಹೋಗುತ್ತೆ. ಎಚ್ಚರಿಕೆ, ಇದರಲ್ಲಿ ರಾಜಕೀಯ ಬೇಡ ಎಂದು ಸಹ ಉಲ್ಲೇಖಿಸಿದ್ದಾರೆ. ಕೊನೆಯ ಸಾಲಿನಲ್ಲಿ ಪ್ರಜ್ಞಾ ನಾಗರಿಕರು, ಬಿಜೆಪಿ ಕಾರ್ಯಕರ್ತರು ಎಂದು ಸಹ ಇದೆ.

ಇನ್ನು, ಅನಾಮಧೇಯ ಪತ್ರ ಬಂದಿರುವ ಕುರಿತು, ಮೆಸ್ಕಾಂ ಎಇಇ ಸುರೇಶ್ ಅವರನ್ನು ಶಿವಮೊಗ್ಗ ಲೈವ್.ಕಾಂ ಸಂಪರ್ಕಿಸಿದಾಗ, ಗುರುವಾರವೇ ಈ ಸಂಬಂಧ ದೂರು ನೀಡಲು ಜಿಲ್ಲಾ ರಕ್ಷಣಾಧಿಕಾರಿ ಅವರನ್ನು ಸಂಪರ್ಕಿಸಿದೆವು. ಅವರು ಬ್ಯುಸಿ ಇದ್ದ ಕಾರಣ ಆಗಲಿಲ್ಲ. ಶುಕ್ರವಾರ ದೂರು ಸಲ್ಲಿಸಲಾಗುವುದು ಎಂದು ತಿಳಿಸಿದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment