ಭದ್ರಾವತಿ : ಅಪ್ರಾಪ್ತನಿಗೆ ದ್ವಿಚಕ್ರ ವಾಹನ ಚಲಾಯಿಸಲು ಕೊಟ್ಟಿದ್ದ ತಂದೆಗೆ ಭದ್ರಾವತಿ 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯ 25 ಸಾವಿರ ರೂ. ದಂಡ (Fine) ವಿಧಿಸಿದೆ. ದಂಡ ಪಾವತಿಸಲು ವಿಫಲನಾದರೆ 15 ದಿನ ಜೈಲು ವಾಸದ ಶಿಕ್ಷೆ ನೀಡುವಂತೆ ಆದೇಶಿಸಿದೆ.
ಇದನ್ನೂ ಓದಿ » ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆಯೇ ನಿಂತ ಮೈಸೂರು ಇಂಟರ್ಸಿಟಿ ರೈಲು, ಆಗಿದ್ದೇನು?
ಇದರ ವಿಡಿಯೋ ಲಭ್ಯವಾದ ಹಿನ್ನೆಲೆ ಭದ್ರಾವತಿ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಅಪ್ರಾಪ್ತನ ತಂದೆಗೆ 25 ಸಾವಿರ ರೂ. ದಂಡ ವಿಧಿಸಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿಡಿದೆದ್ದ ಜನ, ಪೆಹಾಲ್ಗಾಮ್ ಹಂತಕರ ವಿರುದ್ಧ ಆಕ್ರೋಶ, ಕ್ಯಾಂಡಲ್ ಬೆಳಗಿ ಶ್ರದ್ಧಾಂಜಲಿ
ಅಪ್ರಾಪ್ತರಿಗೆ ವಾಹನ ಚಾಲನೆ ಮಾಡಲು ಕೊಡುವುದು ಅಪರಾಧ. ಈ ಕುರಿತು ಪೋಷಕರು ಮತ್ತು ವಾಹನ ಮಾಲೀಕರು ಎಚ್ಚರ ವಹಿಸಬೇಕು ಎಂದು ಸಂಚಾರ ಠಾಣೆ ಪೊಲೀಸರು ಎಚ್ಚರಿಸಿದ್ದಾರೆ.
ಕುಡಿದು ವಾಹನ ಚಾಲನೆ, ದಂಡ
ಏ.15ರಂದು ಮದ್ಯಪಾನ ಮಾಡಿ ಭದ್ರಾವತಿ ನಗರದ ಸಿ.ಎನ್.ರಸ್ತೆಯ ಹೊಳೆಹೊನ್ನೂರು ಸರ್ಕಲ್ ಬಳಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವ್ಯಕ್ತಿ ವಿರುದ್ಧ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ದ್ವಿಚಕ್ರ ವಾಹನ ಚಾಲಕ ಆರುಮುಗಂ ಎಂಬುವವರಿಗೆ 10 ಸಾವಿರ ರೂ. ದಂಡ ವಿಧಿಸಿದೆ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200