ಹೊಳೆಹೊನ್ನೂರು: ಸಿದ್ಲೀಪುರ ಗ್ರಾಮದ ಸುಕ್ಷೇತ್ರ ಶ್ರೀ ಆಂಜನೇಯಸ್ವಾಮಿಯ ಬ್ರಹ್ಮರಥೋತ್ಸವ (Brahma Rathotsava) ಹಾಗೂ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ನೆರವೇರಿತು. ಮುಂಜಾನೆ ಶ್ರೀ ಆಂಜನೇಯಸ್ವಾಮಿ ಮೂರ್ತಿಗೆ ಪುಣ್ಯತೀರ್ಥ, ಪಂಚಾಮೃತ ಅಭಿಷೇಕ, ಪುಷ್ಪಾಲಂಕಾರ, ಅರ್ಚನೆ, ಮಂಗಳಾರತಿ, ಮಾಡಲಾಯಿತು.
ನಂತರ ಉತ್ಸವ ಮೂರ್ತಿಯನ್ನು ಗ್ರಾಮದ ಪ್ರಮುಖ ಬೀದಿಯಲ್ಲಿ ಡೋಲು ಭಜಂತ್ರಿಯೊಂದಿಗೆ ಮೆರವಣಿಗೆ ನಡೆಸಲಾಯಿತು. ವಿವಿಧ ವಸ್ತ್ರ, ಪುಷ್ಪಾಲಂಕೃತ ರಥದಲ್ಲಿ ಪ್ರತಿಷ್ಠಾಪಿಸಿ ಮಹಾ ಮಂಗಳಾರತಿ ನೆರವೇರಿಸಿ ರಥೋತ್ಸವ ನಡೆಸಲಾಯಿತು. ಸಿಂಧೂರ ಉತ್ಸವ, ಪುದುರೆ ಉತ್ಸವ, ಕಳಸಾರೋಹಣ, ಹರಿಸೇವೆ, ಗಯೋತ್ಸವ, ಹೋಮ ನಂತರ ಬ್ರಹ್ಮ ರಥೋತ್ಸವ ನಡೆಯಿತು.
ಅನ್ನ ಪ್ರಸಾದ ವಿನಿಯೋಗ ಮಾಡಲಾಯಿತು. ಮುದ್ರೆ, ಜವಳ ಕಾರ್ಯ ನಡೆಯಿತು. ಹರಕೆ ಹೊತ್ತ ಭಕ್ತರು ತಮ್ಮ ಮಕ್ಕಳನ್ನು ದಿಂಡು ಉರುಳಿಸಿದರು. ಆಂಜನೇಯ ಸೇವಾ ಸಮಿತಿ ಸದಸ್ಯರು ಹಾಗೂ ಸುತ್ತಮುತ್ತಲ ಗ್ರಾಮಗಳ ದೊಡ್ಡ ಸಂಖ್ಯೆಯ ಭಕ್ತರು ಭಾಗವಹಿಸಿದ್ದರು.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ