SHIVAMOGGA LIVE NEWS | 26 APRIL 2023
BHADRAVATHI / UDUPI : ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಿದುಳು (Brain) ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡಲು ಕುಟುಂಬದವರು ನಿರ್ಧರಸಿದ್ದಾರೆ. ಏಳು ಮಂದಿಗೆ ಅಂಗಾಂಗ ದಾನ ಮಾಡಲಾಗಿದೆ.

ಭದ್ರಾವತಿ ತಾಲೂಕು ಕೆಂಚನಹಳ್ಳಿ ಗ್ರಾಮದ ನೀರಗುಂಡಿ ರಾಜಪ್ಪ ಎಂಬುವವರ ಮಗ ಉಲ್ಲಾಸ್.ಆರ್ (21) ಅವರ ಅಂಗಾಂಗ ದಾನ ಮಾಡಲಾಗಿದೆ. ಏ.22ರಂದು ಉಲ್ಲಾಸ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಏ.23ರಂದು ಆತನನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಉಲ್ಲಾಸ್ ಅವರ ಮಿದುಳು (Brain) ನಿಷ್ಕ್ರಿಯಗೊಂಡಿತ್ತು. ಈ ಹಿನ್ನೆಲೆ ಕುಟುಂಬದವರು ಅಂಗಾಂಗ ದಾನ ಮಾಡಲು ನಿರ್ಧರಿಸಿದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ, ಅಧಿಕಾರಿಗಳ ಬಳಿ ಸಿಕ್ಕ ಆಸ್ತಿ, ಚಿನ್ನಾಭರಣ, ವಾಹನಗಳೆಷ್ಟು?
ಹೃದಯ, ಶ್ವಾಸಕೋಶ, ಮೂತ್ರಪಿಂಡಗಳು, ಯಕೃತ್ ಮತ್ತು ಎರಡು ಕಾರ್ನಿಯಾಗಳನ್ನು ದಾನ ಮಾಡಲಾಗಿದೆ. ಶ್ವಾಸಕೋಶವನ್ನು ಚೆನ್ನೈ ಅಪೋಲೊ ಆಸ್ಪತ್ರೆ, ಯಕೃತ್ ಅನ್ನು ಬೆಂಗಳೂರು ಅಸ್ಟರ್ ಸಿಎಂಐ ಆಸ್ಪತ್ರೆ, ಮೂತ್ರಪಿಂಡವನ್ನು ಮಂಗಳೂರಿನ ಎ.ಜೆ.ಆಸ್ಪತ್ರೆ, ಎರಡು ಕಾರ್ನಿಯ ಮತ್ತು ಒಂದು ಮೂತ್ರಪಿಂಡವನ್ನು ಮಣಿಪಾಲದ ನೋಂದಾಯಿತ ರೋಗಿಗಳಿಗೆ ಅಳವಡಿಸಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200