ಶಿವಮೊಗ್ಗ ಲೈವ್.ಕಾಂ | BHADRAVATHI NEWS | 21 ಸೆಪ್ಟಂಬರ್ 2020
ಭದ್ರಾ ಜಲಾಶಯದಿಂದ ಭಾರಿ ಪ್ರಮಾಣದ ನೀರು ಹೊರ ಬಿಡುತ್ತಿರುವುದರಿಂದ ಭದ್ರಾವತಿಯಲ್ಲಿ ಕಾಳಜಿ ಕೇಂದ್ರ ಆರಂಭಿಸಲಾಗಿದೆ. ಕಾಳಜಿ ಕೇಂದ್ರದಲ್ಲಿ ನೂರಕ್ಕು ಹೆಚ್ಚು ಜನರಿಗೆ ಆಶ್ರಯ ನೀಡಲಾಗಿದೆ.
32 ಕುಟುಂಬದ 100ಕ್ಕೂ ಅಧಿಕ ಜನರಿಗೆ ಭದ್ರಾವತಿಯ ಒಕ್ಕಲಿಗ ಸಮುದಾಯ ಭವನದ ಕಾಳಜಿ ಕೇಂದ್ರದಲ್ಲಿ ಆಶ್ರಯ ನೀಡಲಾಗಿದೆ. ಇವರಿಗೆ ಊಟ ಮತ್ತು ಸುರಕ್ಷಿತ ವಸತಿಗೆ ವ್ಯವಸ್ಥೆ ಮಾಡಲಾಗಿದೆ.
30ಕ್ಕೂ ಹೆಚ್ಚು ಮನೆ ಜಲಾವೃತ
ಭದ್ರಾವತಿಯ ಕವಲಗುಂದಿಯ 30ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿದೆ. ಭದ್ರಾ ನದಿಯಲ್ಲಿ ನೀರನ ಮಟ್ಟ ಹೆಚ್ಚಳವಾದರೆ ಇನ್ನಷ್ಟು ಮನೆಗಳು ಜಲಾವೃತವಾಗುವ ಆತಂಕವಿದೆ. ಈ ಮನೆಗಳಲ್ಲಿ ಇದ್ದವರನ್ನು ಕಾಳಜಿ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ.
ಹೊಸ ಸೇತುವೆ ಮೇಲೆ ನೀರು
ಭದ್ರಾವತಿ ಹೊಸ ಸೇತುವೆ ಮೇಲೆ ಇನ್ನೂ ನೀರು ಹರಿಯುತ್ತಿದೆ. ಹಾಗಾಗಿ ಇವತ್ತು ಕೂಡ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಸೇತುವೆಯ ಎರಡು ಬದಿಯಲ್ಲೂ ಬ್ಯಾರಿಕೇಡ್ ಹಾಕಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200