ಶಿವಮೊಗ್ಗ LIVE
ಭದ್ರಾವತಿ: ಖಾಸಗಿ ಬಸ್ಸಿನ ಟೈರ್ ಸ್ಫೋಟಗೊಂಡು (Tire Burst) ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಕಣಗಲಸರ ಗ್ರಾಮದ ನಿವಾಸಿ ಬೀರು (42) ಮೃತಪಟ್ಟವರು. ಅದೇ ಬೈಕಿನಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಲಕ್ಷ್ಮಿ ಎಂಬುವವರಿಗೆ ಗಾಯವಾಗಿದೆ.
ಬೀರು ಅವರು ಲಕ್ಷ್ಮಿ ಅವರನ್ನು ಬೈಕ್ನಲ್ಲಿ ಕುರಿಸಿಕೊಂಡು ಆಸ್ಪತ್ರೆಗೆ ಹೋಗಿ ವಾಪಸ್ ಬರುತ್ತಿದ್ದರು. ಶಂಕರಘಟ್ಟ ಗ್ರಾಮದ ಅಂಗಾಳ ಪರಮೇಶ್ವರಿ ದೇವಸ್ಥಾನದ ಬಳಿ ಸಂಚರಿಸುತ್ತಿದ್ದಾಗ, ಎದುರುಗಡೆಯಿಂದ ಬಂದ ಖಾಸಗಿ ಬಸ್ ಇವರ ಬೈಕನ್ನು ದಾಟಿದ ತಕ್ಷಣ ಅದರ ಟೈರ್ ಸ್ಫೋಟಗೊಂಡಿದೆ. ಈ ವೇಳೆ ಬಸ್ಸಿನಿಂದ ಸಿಡಿದ ವಸ್ತು ಬೈಕ್ ಚಲಾಯಿಸುತ್ತಿದ್ದ ಬೀರು ಅವರ ತಲೆಗೆ ಬಲವಾಗಿ ಹೊಡೆದಿದೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ » ರಸ್ತೆಯಲ್ಲಿ ದಿಢೀರ್ ಎದುರಿಗೆ ಬಂದ ಮುಸುಕುಧಾರಿ, ಖಾರದ ಪುಡಿ ಎರಚಿ, ಗೃಹಿಣಿ ತಲೆಗೆ ರಾಡ್ನಿಂದ ಹೊಡೆತ
ತೀವ್ರವಾಗಿ ಗಾಯಗೊಂಡಿದ್ದ ಬೀರು ಅವರನ್ನು ಶಿವಮೊಗ್ಗದ ಮೆಗ್ಗಾನ್ ಮತ್ತು ಮ್ಯಾಕ್ಸ್ ಆಸ್ಪತ್ರೆಗಳಿಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದ ಕಾರಣ ಜನವರಿ 6 ರಂದು ಮೆಗ್ಗಾನ್ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಬಸ್ ಚಾಲಕನ ನಿರ್ಲಕ್ಷ್ಯದ ವಿರುದ್ಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

- ಶಾಲೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡ ಶಿಕ್ಷಕ

About The Editor
ನಿತಿನ್ ಆರ್.ಕೈದೊಟ್ಲು






