ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹೊಳೆಹೊನ್ನೂರು: ಭದ್ರಾ ಬಲದಂಡೆ ನಾಲೆಗೆ (Bhadra Canal) ಕಾರು ಉರುಳಿ ಬಿದ್ದು, ಚಾಲಕ ಮೃತಪಟ್ಟಿದ್ದಾರೆ. ಹೊಳೆಹೊನ್ನೂರು ಸಮೀಪದ ದಾನವಾಡಿ ಗ್ರಾಮದಲ್ಲಿ ಹಾದು ಹೋಗಿರುವ ನಾಲೆಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ » ಸಿಗಂದೂರು ಸೇತುವೆ ಮೇಲೆ ಕಾರಿನಲ್ಲಿ ಸಂಸದ ರಾಘವೇಂದ್ರ ಸಂಚಾರ, ಪರಿಶೀಲನೆ ಬಳಿಕ ಹೇಳಿದ್ದೇನು?
ಹೊಸದುರ್ಗ ತಾಲೂಕು ಕಾಸಪ್ಪನಹಳ್ಳಿ ಗ್ರಾಮದ ಭೋಜರಾಜ್ (32) ಮೃತಪಟ್ಟವರು. ಗುರುವಾರ ಬೆಳಗ್ಗೆಯಿಂದ ಕಾರು ದಾನವಾಡಿ ಗ್ರಾಮದಲ್ಲಿ ಓಡಾಡಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಧ್ಯಾಹ್ನದ ನಂತರ ಗ್ರಾಮದ ದೊಡ್ಡ ನಾಲೆ ಏರಿ ಮೇಲೆ ಹೋಗಿದೆ. ಸಂಜೆ ಏರಿಯಿಂದ ನಾಲೆಗೆ ಕಾರು ಉರುಳಿದ್ದನ್ನು ಸ್ಥಳೀಯ ಯುವಕರು ನೋಡಿದ್ದಾರೆ.

ಕಾರು ಮೇಲೆತ್ತಲು ಈಶ್ವರ್ ಮಲ್ಪೆ ತಂಡ
ಕ್ಷಣಾರ್ಧದಲ್ಲಿ ಕಾರು ಮುಳುಗಿದ್ದು, ತಕ್ಷಣ ಗ್ರಾಮಸ್ಥರು, ಪೊಲೀಸರಿಗೆ ತಿಳಿಸಿದ್ದಾರೆ. ಬಳಿಕ ಪೊಲೀಸ್ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದು, ಕಾರು ಪತ್ತೆಯಾದರೂ ಮೇಲೆತ್ತಲು ಸಾಧ್ಯವಾಗಲಿಲ್ಲ. ಶುಕ್ರವಾರ ಈಜು ತಜ್ಞ ಮಲ್ಪೆ ಈಶ್ವರ ಅವರನ್ನು ಕರೆಸಿ ಕಾರು ಮೇಲೆತ್ತಲಾಯಿತು. ಕಾರಿನಲ್ಲಿ ಭೋಜರಾಜ್ ಶವ ದೊರೆತಿದ್ದು, ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.

ಘಟನೆಗೆ ಕಾರಣ ತಿಳಿದುಬಂದಿಲ್ಲ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾನವಾಡಿ ಗ್ರಾಮಸ್ಥರು ಮಲ್ಪೆ ಈಶ್ವರ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಸನ್ಮಾನಿಸಿದರು.

ಇದನ್ನೂ ಓದಿ » ವಿಶ್ವದಲ್ಲೆ ಮೊದಲ ಬಾರಿ, ಶಿವಮೊಗ್ಗದಲ್ಲಿ 1404 ಮಂದಿಯಿಂದ ವಚನ ಗಾಯನ, ಹೇಗಿತ್ತು? ಇಲ್ಲಿದೆ ಫೋಟೊ ಆಲ್ಬಂ





LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






