ಭದ್ರಾವತಿ: ಫಾರಂ ಕೋಳಿಗಳನ್ನು (Chicken) ಸಾಗಿಸುತ್ತಿದ್ದ ಕ್ಯಾಂಟರ್ ಲಾರಿ ಪಲ್ಟಿಯಾಗಿದ್ದು, ಕೋಳಿಗಳೆಲ್ಲ ಚೆಲ್ಲಾಪಿಲ್ಲಿಯಾಗಿ ರಸ್ತೆ ಬದಿಗೆ ಬಿದ್ದಿವೆ. ದಾರಿಯಲ್ಲಿ ಹೋಗುತ್ತಿದ್ದ ಜನರು ಕೋಳಿಗಳನ್ನು ಹೊತ್ತೊಯ್ದಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ಶಿವಮೊಗ್ಗದ 2 ಪ್ರಮುಖ ರೈಲ್ವೆ ಮಾರ್ಗ ಯೋಜನೆ ಸ್ಥಗಿತ, ಸಂಸದ ರಾಘವೇಂದ್ರ ಆಕ್ರೋಶ, ಕಾರಣವೇನು?
ಹೊಳೆಹೊನ್ನೂರು ಸಮೀಪದ ಮಲ್ಲಾಪುರ ಗ್ರಾಮದ ದೇವಸ್ಥಾನದ ತಿರುವಿನಲ್ಲಿ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ಲಾರಿ ಪಲ್ಟಿಯಾಗಿದೆ. ಕೋಳಿಗಳನ್ನು ಹೊತ್ತು ಆನವೇರಿ ಕಡೆಗೆ ಲಾರಿ ಸಾಗುತ್ತಿತ್ತು.
ಇನ್ನು, ಲಾರಿಯಿಂದ ಹೊರಬಿದ್ದ ಫಾರಂ ಕೋಳಿಗಳನ್ನು ಜನರು ಹೊತ್ತೊಯ್ದಿದ್ದಾರೆ. ದಾರಿಯಲ್ಲಿ ಹೋಗುತ್ತಿದ್ದವರೆಲ್ಲ ಎರಡ್ಮೂರು ಕೋಳಿಗಳನ್ನು ಹೊತ್ತೊಯ್ದಿದ್ದಾರೆ. ಅಪಘಾತದ ರಭಸಕ್ಕೆ ನೂರಾರು ಕೋಳಿಗಳು ಸಾವನ್ನಪ್ಪಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ವಿಡಿಯೋ, ಮಾಹಿತಿ: ಅನಿಲ್

LATEST NEWS
- ಶಿವಮೊಗ್ಗಕ್ಕೆ ಡಿಜಿಪಿ ಅಲೋಕ್ ಕುಮಾರ್, ಕೇಂದ್ರ ಕಾರಾಗೃಹಕ್ಕೆ ಭೇಟಿ

- ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿದ ವ್ಯಕ್ತಿ ಸಾವು, ಎರಡು ಭಾಗವಾದ ದೇಹ

- ಒಂದು ಮೆಸೇಜ್, ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ₹6.50 ಲಕ್ಷ ಮಾಯ, ಏನಿತ್ತು ಮೆಸೇಜ್ನಲ್ಲಿ?

- ಸಂಸದ ರಾಘವೇಂದ್ರ ಕಾರಿಗೆ ಮತ್ತೊಂದು ಕಾರು ಡಿಕ್ಕಿ, ಆಗಿದ್ದೇನು?

- ಅರಬಿಳಚಿ ದುರಂತ, ಭದ್ರಾ ನಾಲೆಯಲ್ಲಿ ಎರಡನೇ ಮೃತದೇಹ ಪತ್ತೆ

About The Editor
ನಿತಿನ್ ಆರ್.ಕೈದೊಟ್ಲು






