ಭದ್ರಾವತಿ: ಪುರಾಣ ಪ್ರಸಿದ್ಧ ಲಕ್ಷ್ಮಿನರಸಿಂಹ ಸ್ವಾಮಿ ದೇವಸ್ಥಾನದ (temple) ಗೋಪುರಗಳ ಮೇಲೆ ಯಥೇಚ್ಛವಾಗಿ ಬೆಳೆದು ಬೇರು ಬಿಟ್ಟಿದ್ದ ಅರಳಿ ಗಿಡಗಳನ್ನು ಪುರಾತತ್ವ ಇಲಾಖೆಯ ಸಿಬ್ಬಂದಿ ತೆರವುಗೊಳಿಸಿದರು.
ದೇವಾಲಯದ ಮೇಲೆ ಬೆಳೆದಿದ್ದ ಅರಳಿ ಗಿಡಗಳನ್ನು ಕೀಳುವ ಕಾರ್ಯದಲ್ಲಿ ಇಲಾಖೆಯ ಸಿಬ್ಬಂದಿ ರಾಂಪ್ರಕಾಶ್, ನಾರಾಯಣಪ್ಪ ಅವರೊಂದಿಗೆ ಸಾರ್ವಜನಿಕರು ಕೈಜೋಡಿಸಿದರು. ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಮಾರುತಿ, ಮಾಜಿ ಸದಸ್ಯ ವಿಶ್ವನಾಥ್, ಸ್ಥಳೀಯರಾದ ನರಸೇಗೌಡ, ಸುಬ್ರಹ್ಮಣ್ಯ, ವೈಶಾಖ್, ನಿಖಿಲ್, ಹರ್ಷ, ಪ್ರವೀಣ್ ಗಿಡಗಳನ್ನು ಕಿತ್ತು ಬೇರಿಗೆ ರಾಸಾಯನಿಕ ಔಷಧಿ ಸಿಂಪಡಿಸಲು ಸಹಕರಿಸಿದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಟೊಯೋಟ ಸಂಸ್ಥೆಯ ಡೆಮೋ ಕಾರುಗಳ ಮಾರಾಟ, ಎಕ್ಸ್ಚೇಂಜ್ ಮೇಳ, ಯಾವಾಗ? ಎಲ್ಲಿದೆ?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200