ಶಿವಮೊಗ್ಗ ಲೈವ್.ಕಾಂ | BHADRAVATHI NEWS | 25 JANUARY 2021
ಹೃದಯಾಘಾತದಿಂದ ಮೃತಪಟ್ಟ ವಿಐಎಸ್ಎಲ್ ಗುತ್ತಿಗೆ ಕಾರ್ಮಿಕ ಅಂಥೋಣಿ ರಾಜ್ ಕುಟುಂಬಕ್ಕೆ ಪರಿಹಾರ ನೀಡಲು ಗುತ್ತಿಗೆದಾರರು ಒಪ್ಪಿಗೆ ಸೂಚಿಸಿದ್ದಾರೆ. ಹಾಗಾಗಿ ಕಾರ್ಮಿಕರು ಪ್ರತಿಭಟನೆ ಕೈಬಿಟ್ಟಿದ್ದಾರೆ.
ಇವತ್ತು ಬೆಳಗ್ಗೆ ಅಂಥೋಣಿ ರಾಜ್ ಅವರು ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದರು. ಅವರಿಗೆ ಹೃದಯಾಘಾತ ಸಂಭವಿಸಿತ್ತು. ಸರಿಯಾದ ಸಮಯಕ್ಕೆ ಪ್ರಾಥಮಿಕ ಚಿಕಿತ್ಸೆ ಸಿಗದೆ ಅವರು ಮೃತಪಟ್ಟಿದ್ದರು. ಅಂಥೋಣಿ ರಾಜ್ ಅವರ ಮೃತದೇಹವನ್ನು ಇರಿಸಿಕೊಂಡು, ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದರು. ಅವರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಶಾಸಕ ಸಂಗಮೇಶ್ವರ್, ಮಾಜಿ ಶಾಸಕ ಅಪ್ಪಾಜಿಗೌಡ ಪುತ್ರ ಅಜಿತ್ ಗೌಡ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಆ ಬಳಿಕ ಅಂಥೋಣಿ ರಾಜ್ ಅವರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಮತ್ತು ಕುಟುಂಬದವರಿಗೆ ಕೆಲಸ ನೀಡಲು ಗುತ್ತಿಗೆದಾರರು ಒಪ್ಪಿದ್ದಾರೆ.
ಈ ಕುರಿತು ಶಿವಮೊಗ್ಗ ಲೈವ್ ಜೊತೆಗೆ ಮಾತನಾಡಿದ ಅಜಿತ್ ಗೌಡ, ಸಭೆಯ ಮಾಹಿತಿ ನೀಡಿದರು. ಅದರ ವಿಡಿಯೋ ರಿಪೋರ್ಟ್ ಇಲ್ಲಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200