ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ಹೂವಿನ ಗಿಡ ಕಡಿಯುವ ವಿಚಾರದಲ್ಲಿ ನಡೆದ ಜಗಳದಲ್ಲಿ ತಾಯಿ ಮತ್ತು ಮಗನ ಮೇಲೆ ಮಚ್ಚು ಹಾಗೂ ದೊಣ್ಣೆಯಿಂದ ಹಲ್ಲೆ ನಡೆಸಿದ್ದ ಆರೋಪಿಗೆ ಭದ್ರಾವತಿ ನ್ಯಾಯಾಲಯವು ಎರಡು ವರ್ಷ ಜೈಲು ಶಿಕ್ಷೆ (Prison) ವಿಧಿಸಿ ಆದೇಶಿಸಿದೆ.
ಗುಡುಮಘಟ್ಟೆ ಗ್ರಾಮದ ರಮೇಶ್ ಪೂಜಾರ್ (42) ಶಿಕ್ಷೆಗೆ ಒಳಗಾದವರು. ಈತನಿಗೆ 2 ವರ್ಷಗಳ ಕಾರಾಗೃಹ ವಾಸ ಹಾಗೂ ₹10,000 ದಂಡ ವಿಧಿಸಿ ಭದ್ರಾವತಿಯ 1ನೇ ಎ.ಸಿ.ಜೆ ಮತ್ತು ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರಾದ ರವಿಕುಮಾರ್.ವಿ ಅವರು ತೀರ್ಪು ನೀಡಿದ್ದಾರೆ.
ಹೂವಿನ ಗಿಡಗಳ ವಿಚಾರದಲ್ಲಿ ಜಗಳ
2021ರ ಸೆಪ್ಟೆಂಬರ್ 28ರಂದು ಗುಡುಮಘಟ್ಟೆ ಗ್ರಾಮದ ಸುನಿಲ್ ಕುಮಾರ್ ಎಂಬುವವರು ತಮ್ಮ ಮನೆಯ ಮುಂದಿನ ಖಾಲಿ ಸೈಟಿನಲ್ಲಿ ಹೂವಿನ ಗಿಡಗಳನ್ನು ಹಾಕಿದ್ದರು. ಈ ಗಿಡಗಳು ಪಕ್ಕದ ಮನೆಯ ರಮೇಶ್ ಪೂಜಾರ್ ಅವರ ಗೋಡೆಗೆ ತಾಗಿಕೊಂಡು ಬೆಳೆದಿದ್ದವು ಎಂಬ ಕಾರಣಕ್ಕೆ ರಮೇಶ್ ಗಿಡಗಳನ್ನು ಕಡಿಯಲು ಮುಂದಾಗಿದ್ದರು. ಇದನ್ನು ಪ್ರಶ್ನಿಸಲು ಹೋದ ಶಾರದಮ್ಮ ಅವರ ಮೇಲೆ ರಮೇಶ್ ಮಚ್ಚು ಹಾಗೂ ದೊಣ್ಣೆಯಿಂದ ಹಲ್ಲೆ ನಡೆಸಿ ರಕ್ತಗಾಯಗೊಳಿಸಿದ್ದನು. ಅಲ್ಲದೆ, ಸುನಿಲ್ ಅವರಿಗೂ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿತ್ತು.
ಇದನ್ನೂ ಓದಿ – ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?
ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಿನ ಎಎಸ್ಐ ಕೃಷ್ಣ ನಾಯ್ಕ್ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಅಪರ ಸರ್ಕಾರಿ ಅಭಿಯೋಜಕ ತಿಪ್ಪೇಶ್ ರಾವ್ ಅವರು ವಾದ ಮಂಡಿಸಿದ್ದರು.
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





