SHIVAMOGGA LIVE NEWS | 28 JUNE 2024
BHADRAVATHI : ಹಾವೇರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಗುರುತು ಪತ್ತೆಯಾಗಿದೆ. ಮೃತ ಪೈಕಿ ಎಮ್ಮೆ ಹಟ್ಟಿಯ ಒಂದೇ ಕುಟುಂಬದವರು (family), ವಿವಿಧೆಡೆಯ ಅವರ ಸಂಬಂಧಿಕರು ಸೇರಿದ್ದಾರೆ.
ಭದ್ರಾವತಿ, ಕಡೂರು, ಶಿವಮೊಗ್ಗದವರು
ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿದವರ ಪೈಕಿ ಎಮ್ಮೆಹಟ್ಟಿ ಗ್ರಾಮದ ಆದರ್ಶ, ವಿಶಲಾಕ್ಷಮ್ಮ, ನಾಗೇಶ್, ಭಾಗ್ಯಾ, ಮಾನಸ, ಸುಭದ್ರ ಇದ್ದಾರೆ. ಶಿವಮೊಗ್ಗ ನಗರದ ಆಲ್ಕೋಳ ನಿವಾಸಿಗಳಾದ ಪರಶುರಾಮ್ ಮತ್ತು ರೂಪ ದಂಪತಿ. ಭದ್ರಾವತಿ ತಾಲೂಕಿನ ಕಲ್ಲಿಹಾಳ್ ಸರ್ಕಲ್ನ ಮಂಜುಳಾ ಬಾಯಿ, ಮಂಜುಳಾ. ಕಡೂರು ತಾಲೂಕಿನ ಬೀರೂರು ನಿವಾಸಿ ಅಂಜು. ಭದ್ರಾವತಿ ತಾಲೂಕಿನ ಮಾಚೇನಹಳ್ಳಿಯ ಪುಣ್ಯ ಬಾಯಿ ಮೃತರು.
ಅಂತಿಮ ದರ್ಶನಕ್ಕೆ ವ್ಯವಸ್ಥೆ
ಒಂದೇ ಕುಟುಂಬದವರು ಅಪಘಾತದಲ್ಲಿ ಮೃತಪಟ್ಟ ವಿಚಾರ ತಿಳಿದು ಎಮ್ಮೆಹಟ್ಟಿ ಗ್ರಾಮದಲ್ಲಿ ಮೌನ ಆವರಿಸಿದೆ. ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಎಮ್ಮೆಹಟ್ಟಿ ಗ್ರಾಮದ ಶಾಲೆ ಸಮೀಪ ಅಂತಿಮ ದರ್ಶನಕ್ಕೆ ನಿರ್ಧರಿಸಲಾಗಿದೆ. ಇಲ್ಲಿನ ಹಿಂದು ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ – ಭೀಕರ ಅಪಘಾತ, ಮೃತ 13 ಮಂದಿಯ ಗುರುತು ಪತ್ತೆ, ಎಮ್ಮೆಹಟ್ಟಿಯಲ್ಲಿ ಹೇಗಿದೆ ಪರಿಸ್ಥಿತಿ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200