ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 12 FEBRUARY 2024
BHADRAVATHI : ಪಾನಮತ್ತನಾಗಿದ್ದ ಯುವಕನೊಬ್ಬ ಭರ್ತಿಯಾಗಿದ್ದ ಅಡುಗೆ ಅನಿಲ ಸಿಲಿಂಡರ್ ಅನ್ನು ನಡು ರಸ್ತೆಗೆ ತಂದು ಎತ್ತಿ ಬಿಸಾಡಿ ಆತಂಕ ಸೃಷ್ಟಿಸಿದ್ದಾನೆ. ಕುಡಿದ ಮತ್ತಿನಲ್ಲಿ ಆತ ಸಿಲಿಂಡರ್ ಸ್ಪೋಟಿಸಬಹುದು ಎಂದು ಸ್ಥಳೀಯರು ಆತಂಕಕ್ಕೀಡಾಗಿ ಪೊಲೀಸರಿಗೆ ವಿಷಯ ತಿಳಿಸಿದ್ದರು. ಕುಡುಕನ ರಂಪಾಟದ ವಿಡಿಯೋಗಳು ಈಗ ವೈರಲ್ ಆಗಿದೆ.
ಇದನ್ನೂ ಓದಿ – VISL ಕಾರ್ಖಾನೆ ವಿಚಾರ, ದೆಹಲಿಗೆ ನಿಯೋಗ, 2 ಪ್ರಮುಖ ಬೇಡಿಕೆ ಈಡೇರಿಕೆಗೆ ಉಕ್ಕು ಪ್ರಾಧಿಕಾರಕ್ಕೆ ಒತ್ತಾಯ
ಭದ್ರಾವತಿ ನಗರದ ಹೊಸಮನೆ ಬಲಭಾಗದ 3ನೇ ಅಡ್ಡರಸ್ತೆಯಲ್ಲಿ ಕಳೆದ ಶನಿವಾರ ರಾತ್ರಿ ಘಟನೆ ಸಂಭವಿಸಿದೆ. ಸ್ಥಳೀಯ ನಿವಾಸಿಯೊಬ್ಬ ಕುಡಿದ ಮತ್ತಿನಲ್ಲಿ ಮನೆಯೊಳಗಿಂದ ಸಿಲಿಂಡರ್ ತಂದು ಹೊರಗೆ ಇಟ್ಟು ರಂಪಾಟ ಮಾಡಿದ್ದಾನೆ. ಸಿಲಿಂಡರ್ಗೆ ಬೆಂಕಿ ಹಚ್ಚಿ ಸ್ಪೋಟಿಸುವುದಾಗಿ ಬೆದರಿಸಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಸಿಲಿಂಡರ್ ಎತ್ತೆತ್ತಿ ಎಸೆದು ಆತಂಕ ಸೃಷ್ಟಿ
ಅಡುಗೆ ಅನಿಲದ ಸಿಲಿಂಡರ್ ಅನ್ನು ನಡು ರಸ್ತೆಗೆ ತಂದಿಟ್ಟು ಹುಚ್ಚಾಟ ಮಾಡಿದ್ದಾನೆ. ಒಂದೆರಡು ಬಾರಿ ಸಿಲಿಂಡರ್ ಅನ್ನು ಎತ್ತೆತ್ತಿ ಎಸೆದಿದ್ದಾನೆ. ಇದನ್ನು ಕಂಡು ಸ್ಥಳೀಯರು ದೂರಕ್ಕೆ ಓಡಿದ್ದಾರೆ. ಕೂಡಲೆ ಪೊಲೀಸರಿಗೆ ವಿಷಯ ಮುಟ್ಟಿಸಿದ್ದರು. ಇನ್ನು, ಈತನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಇಡೀ ರಸ್ತೆಯ ನಿವಾಸಿಗಳು ಸಹಿ ಮಾಡಿ ಭದ್ರಾವತಿ ಹೊಸಮನೆ ಠಾಣೆಗೆ ದೂರು ನೀಡಿದ್ದಾರೆ. ಆದರೆ ಯಾವುದೆ ಕ್ರಮವಾಗಿಲ್ಲ ಎಂದು ಸ್ಥಳೀಯರು ಆಪಾದಿಸಿದ್ದಾರೆ.
ಇದನ್ನೂ ಓದಿ – ಮಟಮಟ ಮಧ್ಯಾಹ್ನ ಮನೆಗೆ ನುಗ್ಗಿದ ಕಳ್ಳ, ಹೊರಬಂದು ಚಿಲಕ ಹಾಕಿದ ಮಹಿಳೆ, ಜನ ಮನೆಯೊಳಗೆ ಹೋದಾಗ ಕಾದಿತ್ತು ಶಾಕ್
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















