SHIVAMOGGA LIVE NEWS | 21 SEPTEMBER 2023
BHADRAVATHI : ನಿವೇಶನ ಮತ್ತು ವಸತಿ (House) ರಹಿತರಿಗೆ ವಸತಿ ಮತ್ತು ನಿವೇಶನ ಮಂಜೂರು ಮಾಡುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ (ಸಂಯೋಜಕ) ವತಿಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಯಿತು.
ಹೆಚ್.ಕೆ.ಜಂಕ್ಷನ್ ಸಮೀಪ ಸರ್ವೆ ನಂಬರ್ 29ರಲ್ಲಿ 350 ಬಡ ಕುಟುಂಬಗಳು ವಾಸವಿದ್ದಾರೆ. ಅವರಿಗೆ ಹಕ್ಕುಪತ್ರ ನೀಡಬೇಕು ಮತ್ತು ಮೂಲ ಸೌಕರ್ಯ ಒದಗಿಸಬೇಕು. ತಾರೀಕೆಟ್ಟೆಯಲ್ಲಿ ಸರ್ಕಾರಿ ಜಮೀನು ಲಭ್ಯವಿದೆ. ಇಲ್ಲಿ ಬಡವರಿಗೆ ನಿವೇಶನ ನೀಡಬೇಕು. ಹಾತಕಟ್ಟೆಯಲ್ಲಿ ನಿವೇಶನ ರಹಿತವಾಗಿರುವ 300 ಕುಟುಂಬಗಳಿವೆ ಸೂಕ್ತ ಜಮೀನು ಗುರುತಿಸಿ ನಿವೇಶನ ಕಲ್ಪಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಇದನ್ನೂ ಓದಿ – ಗಣಪತಿ ಮುಂದೆ ಭರ್ಜರಿ ಡಾನ್ಸ್, ವಿಡಿಯೋ ವೈರಲ್, ಮನೆಗೆ ಬಂದರು ಪೊಲೀಸ್, ಏನಿದು ಕೇಸ್?
ದಲಿತ ಸಂಘರ್ಷ ಸಮಿತಿ ಸಂಯೋಜಕ ಅಣ್ಣಾದೊರೆ, ಮೂರ್ತಿ, ತಾಲೂಕು ಸಂಯೋಜಕ ರಾಜು, ಜಗನ್ನಾಥ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಬಸ್ಸಿಗಾಗಿ ಕಾದು ಕಾದು ನಿದ್ರೆಗೆ ಜಾರಿದ ಯುವಕ, ಎಚ್ಚರವಾದಾಗ ಕಾದಿತ್ತು ಆಘಾತ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200