ಭದ್ರಾ ಡ್ಯಾಂನಿಂದ 100 ದಿನ ನೀರು, ಅಚ್ಚುಕಟ್ಟು ರೈತರಿಂದ ಅಹೋರಾತ್ರಿ ಧರಣಿ, ರೈತರ ಆಗ್ರಹವೇನು?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 2 SEPTEMBER 2023

BHADRAVATHI : ಮಳೆ ಇಲ್ಲದೆ ಭದ್ರಾ ಜಲಾಶಯದಲ್ಲಿ (Bhadra Dam) ನಿರೀಕ್ಷಿತ ನೀರಿನ ಸಂಗ್ರಹವಾಗಿಲ್ಲ. ಆದರೂ ಮುಂಗಾರು ಹಂಗಾಮಿಗೆ 100 ದಿನ ನೀರು ಹರಿಸುವ ತೀರ್ಮಾನ ಕೈಗೊಳ್ಳಲಾಗಿದೆ. ಈ ಆದೇಶವನ್ನು ಮರು ಪರಿಶೀಲಿಸಬೇಕು ಎಂದು ರೈತ ಸಂಘದ ನೇತೃತ್ವದಲ್ಲಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸಲಾಯಿತು.

ರೈತ ಮುಖಂಡ ಕೆ.ಟಿ.ಗಂಗಾಧರ್‌ ಅವರ ನೇತೃತ್ವದಲ್ಲಿ ಧರಣಿ ನಡೆಸಲಾಗುತ್ತಿದೆ. ಮೊದಲ ದಿನ ಭದ್ರಾವತಿ ತಾಲೂಕಿನ ರೈತರು ಧರಣಿಯಲ್ಲಿ ಭಾಗವಹಿಸಿದ್ದರು. ನೀರು ಹರಿಸುವ ತೀರ್ಮಾನ ಮರು ಪರಿಶೀಲಿಸುವವರೆಗೆ ಅಚ್ಚುಕಟ್ಟು ಪ್ರದೇಶದ ರೈತರು (farmers) ಪಾಳಿ ವ್ಯವಸ್ಥೆಯಲ್ಲಿ ಧರಣಿ ನಡೆಸಲಿದ್ದಾರೆ.

farmers

ಅವೈಜ್ಞಾನಿಕ ಸುತ್ತೋಲೆ, ರೈತ ನಾಯಕ ಗರಂ

ಪ್ರತಿಭಟನೆ ವೇಳೆ ರೈತರನ್ನು ಉದ್ದೇಶಿಸಿ ಮಾತನಾಡಿದ ರೈತ ನಾಯಕ ಕೆ.ಟಿ.ಗಂಗಾಧರ್‌ ಅವರು, ಸರ್ಕಾರದ ಹಂತದಲ್ಲಿ ನೀರಾವರಿ ಸಲಹಾ ಸಮಿತಿ ಅಸ್ತಿತ್ವದಲ್ಲಿದೆ. ಸರಿಯಾದ ಮಾಹಿತಿ ಇಲ್ಲದೆ ಅಧಿಕಾರಿಗಳು 100 ದಿನ ನೀರು ಹರಿಸುವ ಸುತ್ತೋಲೆ ಹೊರಡಿಸಿದ್ದಾರೆ. ಆದರೆ ಈಗನ ಪರಿಸ್ಥಿತಿಯಲ್ಲಿ 100 ದಿನ ನೀರು ಹರಿಸುವುದು ಅಸಾಧ್ಯ. ಇದರಿಂದ ರೈತರು ನಷ್ಟ ಅನುಭವಿಸಿದರೆ ಪರಿಹಾರ ನೀಡುವವರಾರು. ಅರೆ ನೀರಾವರಿ ಬೆಳೆ ಬೆಳೆಯಬೇಕು. ಭತ್ತ ಬೆಳೆದು ನಷ್ಟವಾದರೆ ಸರ್ಕಾರ ಹೊಣೆಯಲ್ಲ ಎಂದು ಸೂತ್ತೋಲೆ ಹೊರಡಿಸಲಾಗಿದೆ. ಇದರು ಅವೈಜ್ಞಾನಿಕ ಸುತ್ತೋಲೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ – ಶಿವಮೊಗ್ಗ – ಬೆಂಗಳೂರು ಇ-ಬಸ್‌ ಟಿಕೆಟ್‌ ರೇಟ್‌ ಕಡಿತ, ವೀಕೆಂಡ್‌ಗೆ ಪ್ರತ್ಯೇಕ ದರ ಫಿಕ್ಸ್‌

ಸಚಿವರ ಸಮಯ ಪಡೆದು ಸಭೆ

ರೈತರು ಧರಣಿ ನಡೆಸುತ್ತಿದ್ದ ಸ್ಥಳಕ್ಕೆ ಆಗಮಿಸಿದ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರಾದ ಸುಜಾತಾ, ನೀರಾವರಿ ಸಲಹಾ ಸಮಿತಿ ರಚನೆ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಈ ಸಮಿತಿ ಅಧ್ಯಕ್ಷರು. ಅವರ ಸಮಯ ಪಡೆದು ಸಭೆ ನಡೆಸಲಾಗುತ್ತದೆ. ಅಲ್ಲಿ ನೀರು ಹರಿಸುವ ತೀರ್ಮಾನವನ್ನು ಮರುಪರಿಶೀಲಿಸಲಾಗುತ್ತದೆ ಎಂದು ತಿಳಿಸಿದರು.

farmersa

ಹೆಚ್ಚುವರಿ ರಕ್ಷಣಾಧಿಕಾರಿ ಭೇಟಿ

ರೈತರ ಧರಣಿ ಹಿನ್ನೆಲೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಇನ್ನು, ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್‌ ಕುಮಾರ್‌ ಭೂಮರೆಡ್ಡಿ ಅವರು ಸ್ಥಳಕ್ಕೆ ಭೇಟಿ ನೀಡಿದ್ದರು. ಧರಣಿ ನಿರತ ರೈತರ ಮನವೊಲಿಸಲು ಯತ್ನಿಸಿದರು.

ರೈತ ಮುಖಂಡ ಭದ್ರಾವತಿ ಮಂಜಪ್ಪ ಗೌಡ, ಯಶವಂತರಾವ್‌ ಘೋರ್ಪಡೆ, ವೀರೇಶ್‌, ಜಗದೀಶ್‌, ಪುಟ್ಟಪ್ಪ ಸೇರಿದಂತೆ ಹಲವರು ಧರಣಿಯಲ್ಲಿ ಇದ್ದರು.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment