ಕೈಮರ ಸರ್ಕಲ್‌ನಲ್ಲಿ ಅಪಘಾತ, ವ್ಯಕ್ತಿಯ ಎರಡು ಪಾದಗಳು ಅರ್ಧಕ್ಕೆ ಕಟ್‌, ಹೇಗಾಯ್ತು ಘಟನೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭದ್ರಾವತಿ: ರಸ್ತೆ ದಾಟುವಾಗ ವಾಹನ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರ ಎರಡು ಪಾದಗಳು (Feet) ಅರ್ಧಕ್ಕೆ ಮುರಿದಿವೆ. ಯಡೇಹಳ್ಳಿ ಮತ್ತು ಕೈಮರ ಗ್ರಾಮಗಳ ಮಧ್ಯದ ಕೈಮರ ಸರ್ಕಲ್‌ನಲ್ಲಿ ಘಟನೆ ಸಂಭವಿಸಿದೆ.

ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಿಪ್ಪೇರುದ್ರಸ್ವಾಮಿ ಎಂಬುವವರನ್ನು ಅಶೋಕ ಸಂಜೀವಿನಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಹೇಗಾಯ್ತು ಘಟನೆ?

ACCIDENT-NEWS-GENERAL-IMAGE.

ತಿಪ್ಪೇರುದ್ರಸ್ವಾಮಿ ಅವರು ಕೈಮರ ಸರ್ಕಲ್‌ನಲ್ಲಿರುವ ಅಂಗಡಿಯಲ್ಲಿ ಟೀ ಕುಡಿಯಲು ಬೈಕ್‌ ನಿಲ್ಲಿಸಿದ್ದರು. ಮೂತ್ರ ವಿಸರ್ಜನೆಗೆಂದು ರೆಸ್ತೆ ದಾಟಿ ಹೋಗಿದ್ದರು. ಟೀ ಅಂಗಡಿ ಬಳಿ ಮರಳಿ ಬರುವಾಗ ಶಿವಮೊಗ್ಗದಿಂದ ಚನ್ನಗಿರಿ ಕಡೆಗೆ ತೆರಳುತ್ತಿದ್ದ ವಾಹನ ತಿಪ್ಪೇರುದ್ರಸ್ವಾಮಿಗೆ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ.  

ಇದನ್ನೂ ಓದಿ » ಯಡೇಹಳ್ಳಿಯಲ್ಲಿ ಅಪಘಾತ, ತೀವ್ರ ಗಾಯಗೊಂಡಿದ್ದ ಯುವಕ ಸಾವು, ಮಾನವೀಯತೆ ಮೆರೆದ ಪೋಷಕರು

ಘಟನೆಯಲ್ಲಿ ತಿಪ್ಪೇರುದ್ರಸ್ವಾಮಿ ಅವರ ಎರಡು ಕಾಲಿನ ಪಾದಗಳು ಅರ್ಧಕ್ಕೆ ತುಂಡಾಗಿವೆ. ಬಲಗಣ್ಣಿನ ಹುಬ್ಬಿನ ಬಳಿಯು ಪೆಟ್ಟಾಗಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕತ್ತಲಾಗಿದ್ದರಿಂದ ವಾಹನದ ಗುರುತು ಗೊತ್ತಾಗಿಲ್ಲ. ಘಟನೆ ಸಂಬಂಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Feet cut incident at kaimara circle near holehonnuru

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment