BHADRAVATHI, 26 JULY 2024 : ಭದ್ರಾ ಜಲಾಶಯಕ್ಕೆ ಒಳ ಹರಿವು ಏರಿಕೆಯಾಗಿದ್ದು, ನೀರಿನ ಮಟ್ಟ ಹೆಚ್ಚಳವಾಗುತ್ತಿದೆ. ಯಾವುದೇ ಸಂದರ್ಭ ಕ್ರಸ್ಟ್ ಗೇಟ್ ಮೂಲಕ ನೀರು ಹೊರ ಬಿಡುವ ಸಾಧ್ಯತೆ ಇದೆ. ಹಾಗಾಗಿ ನೀರಾವರಿ ನಿಗಮದ ವತಿಯಿಂದ ಮೊದಲ ಅಲರ್ಟ್ (Alert) ಪ್ರಕಟಿಸಲಾಗಿದೆ.
ಏನಿದೆ ಮೊದಲ ಅಲರ್ಟ್ನಲ್ಲಿ?
ಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಸತತ ಮಳೆಯಾಗುತ್ತಿದೆ. ಒಳ ಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ. ಜು.26ರಂದು ಜಲಾಶಯದ ನೀರಿನ ಮಟ್ಟ 174.3 ಅಡಿಗೆ ತಲುಪಿದೆ. ಒಳ ಹರಿವಿನ ಪ್ರಮಾಣ 35 ಸಾವಿರ ಕ್ಯೂಸೆಕ್ನಿಂದ 40 ಸಾವಿರ ಕ್ಯೂಸೆಕ್ ಇದೆ. ಇದೇ ರೀತಿ ಮುಂದುವರೆದರೆ ಶೀಘ್ರದಲ್ಲಿ ಭದ್ರಾ ಜಲಾಶಯದ ನೀರಿನ ಮಟ್ಟ ಗರಿಷ್ಠ ಹಂತಕ್ಕೆ ತಲುಪಲಿದೆ. ಯಾವುದೆ ಸಂದರ್ಭ ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗುತ್ತದೆ ಎಂದು ತಿಳಿಸಲಾಗಿದೆ.
ಭದ್ರಾ ನದಿ ಎಡ ಮತ್ತು ಬಲ ದಂಡೆಯ ಉದ್ದಕ್ಕೂ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಗಳಿಗೆ ಹೋಗಬೇಕು. ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದು, ಜಾನುವಾರುಗಳನ್ನು ನದಿ ಪಾತ್ರದಲ್ಲಿ ಮೇಯಿಸುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ ⇓
ಸೂಡೂರು ಕಾಡಿನಲ್ಲಿ ಕಿರುತೆರೆ ನಟಿ ನೇತೃತ್ವದಲ್ಲಿ ವಿಭಿನ್ನ ಕಾರ್ಯಕ್ರಮ – 3 ಫಟಾಫಟ್ ನ್ಯೂಸ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200