SHIVAMOGGA LIVE NEWS | 25 DECEMBER 2022
ಭದ್ರಾವತಿ : ಬಾಲಕನ ಅಪಹರಣ (kidnap case) ಮಾಡಿ ಪೋಷಕರಿಗೆ ಹಣದ ಬೇಡಿಕೆ ಇಟ್ಟಿದ್ದ ಗ್ಯಾಂಗ್ ಒಂದನ್ನು ಭದ್ರಾವತಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿ ಮಹಮದ್ ಅಜರ್ ಎಂಬುವವರ 16 ವರ್ಷದ ಮಗನ ಕಿಡ್ನಾಪ್ (kidnap case) ಮಾಡಲಾಗಿತ್ತು. ಡಿ.22ರಂದು ರಾತ್ರಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಬಾಲಕನ ಅಪಹರಣ ಮಾಡಿದ್ದರು. ಅಲ್ಲದೆ ಹಣಕ್ಕೆ ಬೇಡಿಕೆಯನ್ನು ಇಟ್ಟಿದ್ದರು. ಈ ಸಂಬಂಧ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ರಾಶಿ ರಾಶಿ ಸೈಲೆನ್ಸರ್ ಗಳನ್ನು ರಸ್ತೆ ಮೇಲಿಟ್ಟು ಬುಲ್ಡೋಜರ್ ಹತ್ತಿಸಿದ ಪೊಲೀಸರು
ತನಿಖೆ ಕೈಗೊಂಡ ನ್ಯೂಟೌನ್ ಠಾಣೆ ಪೊಲೀಸರು ಬಾಲಕನ ಪತ್ತೆ ಮಾಡಿದ್ದಾರೆ. ಅಪಹರಣಕಾರರನ್ನು ಬಂಧಿಸಿದ್ದಾರೆ. ಭದ್ರಾವತಿ ನೆಹರು ನಗರದ ಮುಬಾರಕ್ ಅಲಿಯಾಸ್ ಡಿಚ್ಚಿ (24), ಸಾಗರದ ಜಾಬೀರ್ ಬಾಷಾ ಅಲಿಯಾಸ್ ರಾಬರ್ಟ್ (22), ಶಿವಮೊಗ್ಗ ಟಿಪ್ಪುನಗರದ ಮುಸ್ತಫಾ (26), ಸಾಗರ ನೂರುಲ್ ಹುದಾ ಮಸೀದಿ ಸಮೀಪದ ಅಡಕೆ ವ್ಯಾಪಾರಿ ಅಬ್ದುಲ್ ಸಲಾಂ (26), ಸಾಗರ ಅಣಲೆಕೊಪ್ಪದ ಇರ್ಫಾನ್ (31) ಬಂಧಿತರು. ಇವರಿಂದ ಒಂದು ಕಾರನ್ನು ವಶಕ್ಕೆ ಪಡೆಯಲಾಗಿದೆ.
ಭದ್ರಾವತಿ ಎ.ಎಸ್.ಪಿ ಜಿತೇಂದ್ರ ದಯಾಮ, ಸಿಪಿಐ ರಾಘವೇಂದ್ರ ಕಾಂಡಿಕೆ ಅವರ ನೇತೃತ್ವದಲ್ಲಿ, ನ್ಯೂಟೌನ್ ಪೊಲೀಸ್ ಠಾಣೆ ಪಿಎಸ್ಐ ರಂಗನಾಥ ಅಂತರಗಟ್ಟಿ, ಸಿಬ್ಬಂದಿ ಎ.ಎಸ್.ಐ ವೇಂಕಟೇಶ, ರಾಘವೇಂದ್ರ, ಶ್ಯಾಮಕುಮಾರ, ಶ್ರೀಧರ, ರೂಪೇಶ, ಹಾಲಪ್ಪ, ಮೌನೇಶ, ಪೈರೋಜ್, ಸುನೀಲ್ ಕುಮಾರ, ತೀರ್ಥಲಿಂಗಪ್ಪ ಅವರ ತಂಡ ಆರೋಪಿಗಳನ್ನು ಬಂಧಿಸಿದೆ.

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು


CLICK & JOIN – SHIVAMOGGA LIVE COMMUNITY



