ಹೊಳೆಹೊನ್ನೂರಿನಲ್ಲಿ ಮನೆಗಳು ಜಲಾವೃತ, ಮಂಗೋಟೆ ಬಳಿ ರಸ್ತೆ ಮೇಲೆ ಹರಿದ ನೀರು, ಎಲ್ಲೆಲ್ಲಿ ಏನೇನಾಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

HOLEHONNURU, 1 AUGUST 2024 : ತುಂಗಾ ಮತ್ತು ಭದ್ರಾ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನು ಹರಿಸಲಾಗುತ್ತಿದೆ. ಇದರಿಂದ ಹೊಳೆಹೊನ್ನೂರು ಪಟ್ಟಣದ ವಿವಿಧೆಡೆ ನೀರು ನುಗ್ಗಿ (Flood) ಆಸ್ತಿಪಾಸ್ತಿ ಹಾನಿ ಉಂಟಾಗಿದೆ. ಶಾಸಕಿ ಶಾರದಾ ಪೂರ್ಯಾನಾಯ್ಕ್‌, ಉಪ ವಿಭಾಗಾಧಿಕಾರಿ ಸತ್ಯನಾರಾಯಣ ಸೇರಿದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು.

ಎಲ್ಲೆಲ್ಲಿ ನುಗ್ಗಿದೆ ನೀರು?

ಹೊಳೆಹೊನ್ನೂರಿನ ಎಂ.ಡಿ.ಕಾಲೋನಿಗೆ ತುಂಗಾಭದ್ರ ನದಿ ನೀರು ನುಗ್ಗಿದೆ. 13ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದೆ. ವಡೇರಪುರದ ಎ.ಡಿ ಕಾಲೋನಿಯಲ್ಲಿ 4 ಮನೆಗಳು ಜಲಾವೃತವಾಗಿದೆ. ಇಲ್ಲಿಯ ನಿವಾಸಿಗಳನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.

flood-at-holehonnuru.

ಮಂಗೋಟೆಯಲ್ಲಿ ತೋಟ, ರಸ್ತೆ ಜಲಾವೃತ

ಇತ್ತ ಮಂಗೋಟೆ ಗ್ರಾಮದಲ್ಲಿ ತುಂಗಭದ್ರ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇಲ್ಲಿನ ತೋಟಗಳಿಗೆ ನೀರು ನುಗ್ಗಿದೆ. ನೀರು ಹರಿಯುತ್ತಿದ್ದರಿಂದ ಮಂಗೋಟೆ – ಆನವೇರಿ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತವಾಗಿತ್ತು. ನದಿ ಪಾತ್ರದ ವಿವಿಧೆಡೆ ನೀರು ನುಗ್ಗಿರುವ ವರದಿಯಾಗಿದೆ.

mla sharada purayanaik visit holehonnuru

ಎಂಎಲ್‌ಎ, ಅಧಿಕಾರಿಗಳು ಭೇಟಿ

ಇನ್ನು, ಹೊಳೆಹೊನ್ನೂರಿನಲ್ಲಿ ಜಲಾವೃತವಾದ ಪ್ರದೇಶಗಳಿಗೆ ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಭೇಟಿ ನೀಡಿ ಪರಿಶೀಲಿಸಿದರು. ಕಾಳಜಿ ಕೇಂದ್ರಕ್ಕ ತೆರಳಿದ್ದರು. ಇನ್ನು, ಉಪ ವಿಭಾಗಾಧಿಕಾರಿ ಸತ್ಯನಾರಾಯಣ ಅವರು ಭೇಟಿ ನೀಡಿದ್ದರು. ಜನಪ್ರತಿನಿಧಿಗಳು, ಅಧಿಕಾರಿಗಳ ಭೇಟಿ ಸಂದರ್ಭ ನಾಗರಿಕರು ನಮ್ಮ ನೋವು ತೋಡಿಕೊಂಡರು.

AC Satyanarayana visit holehonnuru

ಉಪ ತಹಶೀಲ್ದಾರ್‌ ವಿಜಯ್‌, ರಾಜಸ್ವ ನಿರೀಕ್ಷಕ ರವಿಕುಮಾರ್‌ ಸೇರಿದಂತೆ ಹಲವು ಅಧಿಕಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಇದನ್ನೂ ಓದಿ ⇓

ಮತ್ತೊಂದು ವಿಮಾನ ನಿಲ್ದಾಣ ಮಂಜೂರಾತಿಗೆ ಮನವಿ ಸಲ್ಲಿಸಿದ ಶಿವಮೊಗ್ಗ ಸಂಸದ ರಾಘವೇಂದ್ರ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 1, 2024

Leave a Comment