ದನದ ಕೊಟ್ಟಿಗೆಯಲ್ಲಿ ಮೂರು ಮುಳ್ಳು ಹಂದಿಗಳ ಮೃತದೇಹ ಪತ್ತೆ, ಆರೋಪಿಗಳಿಗೆ ನ್ಯಾಯಾಂಗ ಬಂಧನ

ಭದ್ರಾವತಿ: ದನದ ಕೊಟ್ಟಿಗೆಯಲ್ಲಿ ಮೂರು ಮುಳ್ಳು ಹಂದಿಗಳ ಮೃತದೇಹಗಳು ಪತ್ತೆಯಾಗಿವೆ. ಘಟನೆ ಸಂಬಂಧ ಮೂವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಭದ್ರಾವತಿ ವಿಭಾಗದ ತರೀಕೆರೆ ವಲಯದ ಹುಣಸಘಟ್ಟ ಶಾಖಾ ವ್ಯಾಪ್ತಿಯ ಸಾವೆಮರಡಿ ಕಾವಲ್ ಗ್ರಾಮದ ಘಟನೆ ನಡೆದಿದೆ. ಸುರೇಶ ಎಂಬುವವರ ದನದ ಕೊಟ್ಟಿಗೆಯಲ್ಲಿ ಮುಳ್ಳು ಹಂದಿಗಳ ಮೃತದೇಹಗಳು ಪತ್ತೆಯಾಗಿದ್ದವು. ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಮೂರು ಮುಳ್ಳು ಹಂದಿಗಳ ಮೃತದೇಹವನ್ನು ವಶಕ್ಕೆ ಪಡೆದಿದ್ದಾರೆ.

forest-officials-arrest-three-accused-and-seize-dead-porcupines

ವಲಯ ಅರಣ್ಯಾಧಿಕಾರಿ ಹರೀಶ್ ಕೆ.ಆರ್. ನೇತೃತ್ವದಲ್ಲಿ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಉಮೇಶ್.ಕೆ, ಗಸ್ತು ಅರಣ್ಯ ಪಾಲಕರಾದ ಅನ್ನಪೂರ್ಣೇಶ್ವರಿ ಹೆಗ್ಗಡೆ, ಸುನಿಲ್ ಪೂಜಾರಿ ಹಾಗೂ ನೆಡುತೋಪು ಕಾವಲುಗಾರರಾದ ರಾಜು ಮತ್ತು ನಾಗರಾಜ ಉಪಸ್ಥಿತರಿದ್ದರು.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ