ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಭದ್ರಾವತಿ: ಸೈಲ್ – ವಿಐಎಸ್ಎಲ್ ಆಡಳಿತವು ಅರಣ್ಯ ಇಲಾಖೆ ಸಹಯೋಗದಲ್ಲಿ ‘ಹಸರೀಕರಣದೆಡೆಗೆ ವಿಐಎಎಲ್ ನಡಿಗೆ’ ಸ್ವಚ್ಛತಾ ಕಾರ್ಯಕ್ರಮ ಹಾಗೂ ಸಸಿಗಳ (Saplings) ವಿತರಣೆ ಮೂಲಕ ಸಾಮಾಜಿಕ ಅರಣೀಕರಣಕ್ಕೆ ಮುಂದಾಗಿದೆ.
‘ಹಸರೀಕರಣದೆಡೆಗೆ’ ಮತ್ತು ‘ಸ್ವಚ್ಛತಾ ಹಿ ಸೇವಾ’ ಕಾರ್ಯದ ಅಂಗವಾಗಿ ಸಾಮಾಜಿಕ ಅರಣೀಕರಣದಡಿ ಶಿವಮೊಗ್ಗ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕೆ.ಟಿ.ಹನುಮಂತಪ್ಪ ಅವರಿಗೆ 1100 ಸಸಿಗಳನ್ನು ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್. ಚಂದ್ವಾನಿ ಹಸ್ತಾಂತರಿಸಿದರು.
ಕಾರ್ಖಾನೆ ಆವರಣ ಮತ್ತು ನಗರ ಪ್ರದೇಶದಲ್ಲಿ ಅರಣ್ಯೀಕರಣಕ್ಕೆ ಕೊಡುಗೆ ನೀಡುವುದಲ್ಲದೆ, ಗಣರಾಜ್ಯೋತ್ಸವ, ಸೈಲ್ ದಿನಾಚರಣೆ, ಸಂಸ್ಥಾಪಕರ ದಿನ, ಸ್ವಾತಂತ್ರ್ಯ ದಿನಾಚರಣೆಯಂತಹ ವಿಶೇಷ ಕಾರ್ಯಕ್ರಮ ಸಂದರ್ಭ ಸಾರ್ವಜನಿಕರಿಗೆ ಉಪಯೋಗವಾಗುವ ಸಸಿಗಳನ್ನು ಸಂಸ್ಥೆ ಉಚಿತವಾಗಿ ವಿತರಿಸುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕೆಯಡಿ ಆಯೋ ಜಿಸಲಾದ ಆರೋಗ್ಯ ತಪಾಸಣಾ ಶಿಬಿರಗಳಲ್ಲಿ ಈ ವರ್ಷ ಸುಮಾರು 8500 ಸಸಿಗಳನ್ನು, 3000 ಬೀಜಗಳನ್ನು ವಿತರಿಸಿದೆ.
- ಕೆ.ಟಿ. ಹನುಮಂತಪ್ಪ, ಶಿವಮೊಗ್ಗ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ
![]()
ಮುಖ್ಯ ಮಹಾಪ್ರಬಂಧಕ ಕೆ.ಎಸ್. ಸುರೇಶ್, ಮಹಾಪ್ರಬಂಧಕರಾದ ಎಲ್. ಪ್ರವೀಣ್ ಕುಮಾರ್, ಮುತ್ತಣ್ಣ ಸುಬ್ಬರಾವ್, ಕಾರ್ಮಿಕರ ಸಂಘದ ಅಧ್ಯಕ್ಷ ಜೆ. ಜಗದೀಶ, ಅಧಿಕಾರಿಗಳ ಸಂಘದ ಉಪಾಧ್ಯಕ್ಷ ಡಾ. ಎಸ್.ಎನ್. ಸುರೇಶ್ ಮತ್ತು ಖಜಾಂಚಿ ಇಳಯರಾಜ, ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ರತ್ನ ಪ್ರಭಾ, ಉಮರ್ ಬಾಷಾ, ವಲಯ ಅರಣ್ಯಾಧಿಕಾರಿಗಳಾದ ಎಂ.ಎಸ್. ಪ್ರದೀಪ್, ಕೆ.ಬಿ.ರಾಘವೇಂದ್ರ, ದಿನೇಶ್, ಶಫಿ ಮತ್ತಿತರರು ಹಾಜರಿದ್ದರು.
ಇದನ್ನೂ ಓದಿ » KGFಗೆ ತೆರಳಲು ಶಿವಮೊಗ್ಗದಲ್ಲಿ ಬೆಂಗಳೂರು ಬಸ್ ಹತ್ತಿದ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?
Saplings


