ರಾತ್ರೋರಾತ್ರಿ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸ, ಆಕ್ರೋಶ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 21 AUGUST 2023

HOLEHONNURU : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು (Gandhi Statue) ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ತಡರಾತ್ರಿ ಕೃತ್ಯ ನಡೆದಿದ್ದು ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ದುಷ್ಕೃತ್ಯ ಎಸಗಿದವರ ಪತ್ತೆಗೆ ಬಲೆ ಬೀಸಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಹೊಳೆಹೊನ್ನೂರು ಪಟ್ಟಣದ ಗಾಂಧಿ ಸರ್ಕಲ್‌ನಲ್ಲಿದ್ದ (Gandhi Circle) ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ಹಾನಿಗೊಳಿಸಲಾಗಿದೆ. ಬೈಕಿನಲ್ಲಿ ಬಂದ ಇಬ್ಬರು ದುಷ್ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. ವಿಚಾರ ತಿಳಿಯುತ್ತಿದ್ದಂತೆ ಜನರು ಗುಂಪುಗೂಡಿದ್ದು, ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ – ಒಂದು ದಿನದ ಮಗುವಿಗಾಗಿ ಎರಡು ಜಿಲ್ಲೆಯ ಪೊಲೀಸರಿಂದ ಜೀರೋ ಟ್ರಾಫಿಕ್‌

ಸರ್ಕಲ್‌ನಲ್ಲಿ ಗಾಂಧಿ ಪ್ರತಿಮೆ, ಅದರ ಸುತ್ತಲು ಮಂಟಪ ನಿರ್ಮಿಸಲಾಗಿದೆ. ಈ ಮಂಟಪದೊಳಗಿದ್ದ ಪ್ರತಿಮೆಯನ್ನು ಧ್ವಂಸ ಮಾಡಲಾಗಿದೆ. ಕಿಡಿಗೇಡಿಗಳ ಪತ್ತೆಗಾಗಿ ಸಮೀಪದ ಸಿಸಿಟಿವಿಗಳನ್ನು ಪರಿಶೀಲಿಸಲಾಗುತ್ತಿದೆ. ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment