SHIVAMOGGA LIVE NEWS | 21 AUGUST 2023
HOLEHONNURU : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು (Gandhi Statue) ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ತಡರಾತ್ರಿ ಕೃತ್ಯ ನಡೆದಿದ್ದು ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ದುಷ್ಕೃತ್ಯ ಎಸಗಿದವರ ಪತ್ತೆಗೆ ಬಲೆ ಬೀಸಿದ್ದಾರೆ.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ಹೊಳೆಹೊನ್ನೂರು ಪಟ್ಟಣದ ಗಾಂಧಿ ಸರ್ಕಲ್ನಲ್ಲಿದ್ದ (Gandhi Circle) ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ಹಾನಿಗೊಳಿಸಲಾಗಿದೆ. ಬೈಕಿನಲ್ಲಿ ಬಂದ ಇಬ್ಬರು ದುಷ್ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. ವಿಚಾರ ತಿಳಿಯುತ್ತಿದ್ದಂತೆ ಜನರು ಗುಂಪುಗೂಡಿದ್ದು, ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ – ಒಂದು ದಿನದ ಮಗುವಿಗಾಗಿ ಎರಡು ಜಿಲ್ಲೆಯ ಪೊಲೀಸರಿಂದ ಜೀರೋ ಟ್ರಾಫಿಕ್
ಸರ್ಕಲ್ನಲ್ಲಿ ಗಾಂಧಿ ಪ್ರತಿಮೆ, ಅದರ ಸುತ್ತಲು ಮಂಟಪ ನಿರ್ಮಿಸಲಾಗಿದೆ. ಈ ಮಂಟಪದೊಳಗಿದ್ದ ಪ್ರತಿಮೆಯನ್ನು ಧ್ವಂಸ ಮಾಡಲಾಗಿದೆ. ಕಿಡಿಗೇಡಿಗಳ ಪತ್ತೆಗಾಗಿ ಸಮೀಪದ ಸಿಸಿಟಿವಿಗಳನ್ನು ಪರಿಶೀಲಿಸಲಾಗುತ್ತಿದೆ. ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.