Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » 23 ತಿಂಗಳು ಹೊರಜಗತ್ತಿಗೆ ಕಾಣಿಸದ ಸ್ವಾಮೀಜಿ, ತಪೋನುಷ್ಠಾನದ ಬಳಿಕ ಮಠಕ್ಕೆ ಭಕ್ತ ಸಾಗರ, ಏನಿದು ತಪಸ್ಸು?

23 ತಿಂಗಳು ಹೊರಜಗತ್ತಿಗೆ ಕಾಣಿಸದ ಸ್ವಾಮೀಜಿ, ತಪೋನುಷ್ಠಾನದ ಬಳಿಕ ಮಠಕ್ಕೆ ಭಕ್ತ ಸಾಗರ, ಏನಿದು ತಪಸ್ಸು?

06/09/2021 5:29 PM
ನಿತಿನ್‌ ಕೈದೊಟ್ಲು

ಶಿವಮೊಗ್ಗ ಲೈವ್.ಕಾಂ |BHADRAVATHI NEWS | 6 ಸೆಪ್ಟೆಂಬರ್ 2021

ಇವತ್ತಿನ ಎಲ್ಲ NEWS
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

shivamogga live news whatsappa number

23 ತಿಂಗಳು ಬಾಹ್ಯ ಪ್ರಪಂಚದಿಂದ ದೂರ ಉಳಿದು ತಪಸ್ಸು ನಡೆಸುತ್ತಿದ್ದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರ ತಪೋನುಷ್ಠಾನ ಪೂರ್ಣಗೊಂಡಿದೆ. ಇದೆ ಮೊದಲ ಭಾರಿಗೆ ಭಕ್ತರಿಗೆ ದರ್ಶನ ನೀಡಿದ್ದಾರೆ. ಶ್ರೀಗಳನ್ನು ಕಣ್ತುಂಬಿಕೊಂಡು, ಪೂಜೆ ಸಲ್ಲಿಸಲು ದೂರದೂರುಗಳಿಂದ ಭಕ್ತರು ಆಗಮಿಸಿದ್ದರು.

ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ಶೀಲ ಸಂಪಾದನಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರ ತಪೋನುಷ್ಠಾನದ ಸಮಾರೋಪ, ದಾಸೋಹ ಮಂದಿರ ಉದ್ಘಟನಾ ಸಮಾರಂಭ ನಡೆಯಿತು.

ಸಮಾಜದಲ್ಲಿ ಬಹಿರ್ಮುಖ ಜಾಸ್ತಿಯಾಗಿದೆ

ಶ್ರೀಗಳ ತಪೋನುಷ್ಠಾನದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡಿದ್ದ ತುಮಕೂರು ಸಿದ್ಧಗಂಗ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಮಾತನಾಡಿ, ಮನುಷ್ಯನಿಗೆ ಅಂತರ್ಮುಖ ಮತ್ತು ಬಹಿರ್ಮುಖ ಎಂಬ ಎರಡು ಮುಖಗಳಿರುತ್ತವೆ. ಇಂದು ಸಮಾಜದಲ್ಲಿ ಬಹಿರ್ಮುಖ ಜಾಸ್ತಿಯಾಗಿದ್ದು, ವಿಜೃಂಭಣೆಯನ್ನು ಕಾಣುತ್ತಿದ್ದೇವೆ. ಇದರಿಂದ ಅಂತರ್ಮುಖ ದುರ್ಬಲಗೊಳ್ಳುತ್ತಿದೆ. ಅಂತರ್ಮುಖದಲ್ಲಿಯೂ ಮನುಷ್ಯ ಹೆಚ್ಚಿನ ಶ್ರೀಮಂತಿಕೆಯನ್ನು ಹೊಂದಬಹುದು ಎಂಬುದು ಶ್ರೀಗಳ ತಪಸ್ಸಿನ ಒಂದು ಸಂದೇಶವಾಗಿದೆ ಎಂದರು.

ಭಕ್ತರಿಗಾಗಿ ದೇಹ ದಂಡಿಸಿಕೊಂಡು ಅನುಷ್ಠಾನ

ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ವೈಜ್ಞಾನಿಕ ಯುಗದಲ್ಲಿ ಶಾಂತಿ, ನೆಮ್ಮದಿ ಕಳೆದುಕೊಂಡಿದ್ದೇವೆ. ಮನಃಶಾಂತಿ ಪುನರ್ ಭರಿಸುವ ಶಕ್ತಿ ಮಠಗಳಿಗೆ ಇದೆ. 23 ತಿಂಗಳು ತಪಸ್ಸು ಕೈಗೊಂಡು ಶ್ರೀಗಳು ತಮ್ಮ ದೇಹವನ್ನು ದಂಡಿಸಿಕೊಂಡಿದ್ದಾರೆ. ಇದೆ ರೀತಿ ಸಾಕಷ್ಟು ಭಾರಿ ಅನುಷ್ಠಾನ ಕೈಗೊಂಡಿದ್ದಾರೆ ಎಂದರು.

ಹೇಗಿರುತ್ತೆ ಸುದೀರ್ಘ ಅನುಷ್ಠಾನ?

ಗೋಣಿಬೀಡಿನ ಶೀಲ ಸಂಪಾದನಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರ ತಪೋನುಷ್ಠಾನ ದೇಶಾದ್ಯಂತ ಪ್ರಖ್ಯಾತಿ ಪಡೆದಿದೆ. ಮಠದ 19ನೇ ಗುರುಗಳಾಗಿರುವ ಶ್ರೀ ಸಿದ್ಧಲಿಂಗ ಸ್ವಾಮೀಜಿಯವರಿಗೆ ಒಮ್ಮೆ ಋಷಿ ಮುನಿಯಂತಿದ್ದ ಸ್ವಾಮೀಜಿಯೊಬ್ಬರು ಪ್ರತ್ಯಕ್ಷರಾಗಿ ತಪೋನುಷ್ಠಾನ ಕೈಗೊಳ್ಳುವಂತೆ ಸೂಚಿಸಿದ್ದರು. ಮಠದ ಪಕ್ಕದ ತಿಪ್ಪೆಯ ಅಡಿಯಲ್ಲಿ ಯೋಗ ಮಂದಿರವಿದ್ದು, ಅಲ್ಲಿ ಅನುಷ್ಠಾನ ಕೈಗೊಳ್ಳುವಂತೆ ಋಷಿ ಮುನಿ ಹೇಳಿದ್ದರು. ಆ ಋಷಿ ಮುನಿ ಈ ಮಠದ ಹಿಂದಿನ ಗುರುಗಳಾಗಿದ್ದ ಶಿವೈಕ್ಯ ಶ್ರೀ ಸಿದ್ಧವೀರ ಮಹಾಸ್ವಾಮೀಜಿ ಎಂದು ನಂಬಲಾಗಿದೆ.

LifeSpring%2BKan%2B02

ಅದರಂತೆ ತಿಪ್ಪೆಯನ್ನು ತೆಗೆಸಿ ಶೋಧಿಸಿದಾಗ ನೆಲಮಾಳಿಗೆಯಲ್ಲಿ ಯೋಗ ಮಂದಿರದ ಕುರುಹು ಕಂಡು ಬಂದಿತ್ತು. ಇದನ್ನು ಸ್ವಚ್ಛಗೊಳಿಸಿ, ಅದೇ ಯೋಗ ಮಂದಿರದಲ್ಲಿ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರು ತಪೋನುಷ್ಠಾನ ಮಾಡುತ್ತಿದ್ದಾರೆ. ವರ್ಷಾನುಗಟ್ಟಲೆ ಅನುಷ್ಠಾನ ಕೈಗೊಳ್ಳುವ ಶ್ರೀಗಳು ಈ ಅವಧಿಯಲ್ಲಿ ನೆಲಮಾಳಿಗೆಯಿಂದ ಹೊರ ಬರುವುದಿಲ್ಲ. ಸೂರ್ಯನ ಕಿರಣ ಅವರ ಮೈ ಸೋಕದಂತೆ ನೋಡಿಕೊಳ್ಳುತ್ತಾರೆ. ಅನ್ನಾಹಾರ ಸೇವಿಸುವುದಿಲ್ಲ. ಸ್ವಲ್ಪ ತರಕಾರಿ, ಒಣ ಹಣ್ಣುಗಳನ್ನು ಮಾತ್ರ ಸೇವಿಸುತ್ತಾರೆ.

ಈ ವೇಳೆ ಶ್ರೀಗಳು ಒಬ್ಬಿಬ್ಬರು ಶಿಷ್ಯರ ಹೊರತು ಬೇರಾವುದೆ ಭಕ್ತರನ್ನು ಭೇಟಿಯಾಗುವುದಿಲ್ಲ. ಭಕ್ತರು ಪತ್ರದ ಮೂಲಕ ತಮ್ಮ ನೋವು, ಬೇಡಿಕೆ ಹೇಳಿಕೊಳ್ಳಬಹುದು. ಶ್ರೀಗಳು ಭಕ್ತರ ಬೇಡಿಕೆ ಈಡೇರಲಿ ಎಂದು ಪ್ರಾರ್ಥನೆ ಸಲ್ಲಿಸುತ್ತಾರೆ. ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸಿದರೆ ಅವೆಲ್ಲವು ಈಡೇರಲಿದೆ ಎಂಬ ನಂಬಿಕೆ ಇದೆ. ಈ ಬಾರಿ ಶ್ರೀಗಳು 23 ತಿಂಗಳು ಅನುಷ್ಠಾನ ಕೈಗೊಂಡಿದ್ದಾರೆ. ಈ ಹಿಂದೆ ಮೂರು ವರ್ಷ ತಪೋನುಷ್ಠಾನ ಮಾಡಿದ್ದರು.

ಶ್ರೀಗಳ ಅನುಗ್ರಹ ಸಂದೇಶ

ಸಮಾರೋಪದಲ್ಲಿ ಶಿವಮೊಗ್ಗದ ಬಸವಕೇಂದ್ರದ ಡಾ. ಬಸವ ಮರುಳಸಿದ್ಧ ಸ್ವಾಮೀಜಿ ಅವರು ಗೋಣಿಬೀಡು ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರ ಅನುಗ್ರಹ ಸಂದೇಶ ಓದಿದರು. ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಇಮ್ಮಡಿ ಕರಿಬಸವ ದೇಶಿಕೇಂದ್ರ ಸ್ವಾಮೀಜಿ, ಶ್ರೀ ಗುರುಮೂರ್ತಿ ಸ್ವಾಮೀಜಿ, ಶ್ರೀ ರಾಚೋಟೇಶ್ವರ ಸ್ವಾಮೀಜಿ, ಡಾ. ಬಸವ ಜಯಚಂದ್ರ ಸ್ವಾಮೀಜಿ, ಶ್ರೀ ಮಹಾಂತ ಸ್ವಾಮೀಜಿ, ಶ್ರೀ ಚನ್ನಬಸವ ಸ್ವಾಮೀಜಿ, ಎಸ್.ದಯಾನಂದ್, ಭದ್ರಾವತಿ ಶಾಸಕ ಸಂಗಮೇಶ್ವರ್, ಜೆಡಿಎಸ್ ಮುಖಂಡ ಎಂ.ಶ್ರೀಕಾಂತ್, ಡಾ. ಹಿರೇಮಠ್, ಕುವೆಂಪು ವಿವಿ ಕುಲಪತಿ ಪ್ರೊ. ವೀರಭದ್ರಪ್ಪ ಸೇರಿದಂತೆ ಹಲವರು ಇದ್ದರು.

sheela2

sheela1

sheela3

sheela4

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article 060921 JDS wins in 29th Ward at Bhadravathi BREAKING NEWS |ಭದ್ರಾವತಿ 29ನೇ ವಾರ್ಡ್, ಜೆಡಿಎಸ್’ಗೆ ಭರ್ಜರಿ ಗೆಲುವು, ಕಾಂಗ್ರೆಸ್ ಗಳಿಸಿದ್ದೆಷ್ಟು? ಬಿಜೆಪಿ ಪಡೆದ ಮತಗಳೆಷ್ಟು?
Next Article 060921 Complaint Against FB User in Shimoga ಫೇಸ್’ಬುಕ್ಕಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಶ್ಲೀಲ ಪದ ಬಳಕೆ, ಶಿವಮೊಗ್ಗದಲ್ಲಿ ದೂರು

ಇದನ್ನೂ ಓದಿ

Bhadra-Dam-General-Image
BHADRAVATHI

ಭದ್ರಾ ಜಲಾಶಯಕ್ಕೆ ಇವತ್ತು ಎಷ್ಟಿದೆ ಒಳ ಹರಿವು? ನೀರಿನ ಮಟ್ಟ ಎಷ್ಟಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/06/2025
Holehonnuru-residents-protest-against-road-crack
BHADRAVATHI

ಒಂದು ತಿಂಗಳ ಹಿಂದೆ ಉದ್ಘಾಟನೆಯಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿರುಕು, ಜನರ ಆಕ್ರೋಶ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/06/2025
Bhadra-dam-General-Image
BHADRAVATHI

ಭದ್ರಾ ಎಡದಂಡೆ ನಾಲೆ, ಮುಂಗಾರು ಹಂಗಾಮಿನ ಬೆಳೆ ಬೆಳೆಯದಂತೆ ರೈತರಿಗೆ ಸೂಚನೆ, ಕಾರಣವೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/06/2025
lunatic-dog-manace-at-dasarakallahalli-in-bhadravathi-taluk
BHADRAVATHI

ದಾಸರಕಲ್ಲಹಳ್ಳಿಯಲ್ಲಿ ಬೆಳಗ್ಗೆಯಿಂದ ಬಡಿಗೆ ಹಿಡಿದು ಓಡಾಡುತ್ತಿರುವ ಗ್ರಾಮಸ್ಥರು, ಮಕ್ಕಳು, ಕಾರಣವೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/06/2025
Bhadra-Dam-General-Image
BHADRAVATHI

ಭದ್ರಾ ಡ್ಯಾಂ ಒಳ ಹರಿವು ತುಸು ಏರಿಕೆ, ಇವತ್ತು ಎಷ್ಟಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/06/2025
Bhadra-Dam-General-Images
BHADRAVATHI

ಭದ್ರಾ ಜಲಾಶಯದ ಒಳ ಹರಿವು ತುಸು ಹೆಚ್ಚಳ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?