ಜನರ ಸಮಸ್ಯೆ ನೋಡಲಾಗದೆ ರಸ್ತೆ ಗುಂಡಿಗಳನ್ನು ಮುಚ್ಚಿದ ಗ್ರಾಮ ಪಂಚಾಯಿತಿ ಸದಸ್ಯ

SHIVAMOGGA LIVE NEWS, 5 DECEMBER 2024 ➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಹೊಳೆಹೊನ್ನೂರು : ರಸ್ತೆಯಲ್ಲಿನ ಗುಂಡಿಗಳಿಂದ ಗ್ರಾಮಸ್ಥರು ಅನುಭವಿಸುತ್ತಿರುವ ತೊಂದರೆ ಮನಗಂಡ ಆನವೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಟ್ಟಿಗೆಹಳ್ಳಿಯ ಗ್ರಾಮ ಪಂಚಾಯಿತಿ ಸದಸ್ಯ ತಿಪ್ಪೇಶ್ ತಾವೇ ಸ್ವತಃ ಗುಂಡಿಗಳಿಗೆ (Pot Hole) ಮಣ್ಣು ಸುರಿದು ರಸ್ತೆ ದುರಸ್ತಿ ಮಾಡಿದ್ದಾರೆ.

ಭದ್ರಾವತಿ ತಾಲೂಕು ಆವೇರಿಯಿಂದ ಇಟ್ಟಿಗೆಹಳ್ಳಿ ಸಂರ್ಪಕ ಕಲ್ಪಿಸುವ ಡಾಂಬ‌ರ್ ರಸ್ತೆ ಹಲವೆಡೆ ಕಿತ್ತುಹೋಗಿತ್ತು. ಮಳೆ ನೀರು ನಿಂತು ರಸ್ತೆಯಲ್ಲಿ ದೊಡ್ಡ ಗಾತ್ರದ ಗುಂಡಿಗಳಾಗಿದ್ದವು. ಇದರಿಂದ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು ಓಡಾಡುವುದು ಸಹ ಕಷ್ಟವಾಗುತ್ತಿತ್ತು. ಇದ ಕಾರಣಕ್ಕೆ ಗ್ರಾಮ ಪಂಚಾಯಿತಿ ಸದಸ್ಯ ತಿಪ್ಪೇಶ್ ಭಾನುವಾರ 4 ಟ್ರ್ಯಾಕ್ಟರ್ ಲೋಡ್ ಮಣ್ಣು ತರಿಸಿ ಗುಂಡಿಗಳನ್ನು ಮುಚ್ಚಿದ್ದಾರೆ.

pot-holes-colsed-by-grama-panchayat-memeber-at-anaveri.

ಇದನ್ನೂ ಓದಿ » ಈಶ್ವರಪ್ಪಗೆ ಮತ್ತೆ ಸಂಕಷ್ಟ, 20 ದಿನದ ಅಂತರದಲ್ಲಿ ದಾಖಲಾಯ್ತು ಎರಡನೇ ಕೇಸ್‌

ಇಟ್ಟಿಗೆಹಳ್ಳಿಯ ನೀರುಗಂಟಿ ಪರುಶುರಾಮ್ ಹಾಗೂ ಆನವೇರಿ ಗ್ರಾಮ ಪಂಚಾಯಿತಿ ಕರವಸೂಲಿಗಾರ ರಘು ಹಾಗೂ ಇಟ್ಟಿಗೆಹಳ್ಳಿ ಯುವಕ ಸುನೀಲ್ ಅವರು ತಿಪ್ಪೇಶ್ ನೆರವಿಗೆ ಬಂದಿದ್ದಾರೆ. ಗುಂಡಿಗಳಿಗೆ ಮಣ್ಣು ಸುರಿದು ಓಡಾಟಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಕೆಲಸ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗ್ರಾಪಂ ಸದಸ್ಯರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

pot-holes-colsed-by-grama-panchayat-memeber-at-anaveri.

ಇದನ್ನೂ ಓದಿ » ಶಿವಮೊಗ್ಗ ಸೇರಿ ಜಿಲ್ಲೆಯ ಹಲವಡೆ ಮತ್ತೆ ಮಳೆ ಶುರು

Leave a Comment