VISLನಲ್ಲಿ ದಿಢೀರ್‌ ನಡೆಯಿತು ಎರಡನೇ ಮೀಟಿಂಗ್‌, ಕುಮಾರಸ್ವಾಮಿ ನೀಡಿದ ಭರವಸೆ ಏನು?

 ಶಿವಮೊಗ್ಗ  LIVE 

ಭದ್ರಾವತಿ: ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (VISL) ಪುನಶ್ಚೇತನ ಕುರಿತು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ (HD Kumaraswamy), ಬಳಿಕ ಕಾರ್ಖಾನೆಯ ವಿವಿಧ ಘಟಕಗಳಿಗೆ ತೆರಳಿ ಪರಿಶೀಲನೆ ನಡೆಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಒಂದೇ ಭೇಟಿಯಲ್ಲಿ ಎರಡು ಸಭೆ

ವಿಐಎಸ್‌ಎಲ್‌ ವಸತಿ ಗೃಹದಲ್ಲಿ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಮೊದಲ ಹಂತದ ಸಭೆ ನಡೆಸಿದರು. ಈ ಸಭೆಯಲ್ಲಿ ಕಾರ್ಖಾನೆಯ ಪ್ರಸ್ತುತ ಸ್ಥಿತಿ, ಪುನಶ್ಚೇತನದ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಕಾರ್ಖಾನೆಯ ಪುನಶ್ಚೇತನಕ್ಕೆ ಕೇಂದ್ರ ಸರ್ಕಾರದ ಆಸಕ್ತಿಯ ಕುರಿತು ಸಚಿವರು ಸಭೆಗೆ ತಿಳಿಸಿದರು.

ಸಭೆ ಬಳಿಕ ವಿಐಎಸ್‌ಎಲ್‌ ಕಾರ್ಖಾನೆಯ ವಿವಿಧ ಘಟಕಗಳಿಗೆ (UNITS) ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ ನೀಡಿದರು. ಭೇಟಿಯ ಬಳಿಕ ಕುಮಾರಸ್ವಾಮಿ ಅವರು ಅಧಿಕಾರಿಗಳ ಜೊತೆಗೆ ಎರಡನೇ ಸುತ್ತು ಸಭೆ ನಡೆಸಿದರು. ಕಾರ್ಖಾನೆ ಉಳಿಸುವ ಮಾರ್ಗೋಪಾಯಗಳ ಬಗ್ಗೆ ಸಮಾಲೋಚನೆ ನಡೆಸಿದರು. ಅಲ್ಲದೆ ಭಾರತೀಯ ಉಕ್ಕು ಪ್ರಾಧಿಕಾರದ (SAIL) ಹಿರಿಯ ಅಧಿಕಾರಿಗಳ ಜತೆಗೆ ಕೆಲ ಮಹತ್ವದ ಮಾಹಿತಿ ಪಡೆದರು.

291125-Central-Minister-HD-Kumaraswamy-visit-VISL

ಧರಣಿ ಸ್ಥಳಕ್ಕೆ ಮಿನಿಸ್ಟರ್‌ ಭೇಟಿ

ಇನ್ನು, ಕಾರ್ಖಾನೆ ಮುಂಭಾಗ ವಿಐಎಸ್‌ಎಲ್‌ ಕಾರ್ಮಿಕರು (WORKERS) ನಿರಂತರ ಧರಣಿ ನಡೆಸುತ್ತಿದ್ದಾರೆ. ಧರಣಿ ಸ್ಥಳಕ್ಕು ಸಚಿವ ಕುಮಾರಸ್ವಾಮಿ ಭೇಟಿ ನೀಡಿದರು. ಕಾರ್ಮಿಕರನ್ನು ಭೇಟಿಯಾಗಿ ಜೊತೆಗೆ ಚರ್ಚಿಸಿ, ಅಭಯ ನೀಡಿದರು.

ಇದೇ ವೇಳೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ‘ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಸರ್ ಎಂ ವಿಶ್ವೇಶ್ವರಯ್ಯ ಅವರು ಸ್ವಾತಂತ್ರ್ಯ ಪೂರ್ವದಲ್ಲಿಯೇ ಕಟ್ಟಿದ್ದ ಈ ಕಾರ್ಖಾನೆ ರಾಷ್ಟ್ರದ ಉಕ್ಕು ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದೆ. ಹೇಗಾದರೂ ಮಾಡಿ ಕಾರ್ಖಾನೆಯನ್ನು ಉಳಿಸುವ ಬಗ್ಗೆ ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಚಿಂತನೆ ನಡೆಸುತ್ತಿದೆ. ನಾನು ಉಕ್ಕು ಸಚಿವನಾದ ಮೇಲೆ ಈ ಕಾರ್ಖಾನೆಗೆ ಎರಡನೇ ಸಲ ಭೇಟಿ ನೀಡಿದ್ದೇನೆ. ಕೇಂದ್ರ ಸರ್ಕಾರ ಎಷ್ಟು ಗಂಭೀರವಾಗಿ ಕಾರ್ಖಾನೆಯನ್ನು ಪರಿಗಣಿಸಿದೆ ಎಂಬುದಕ್ಕೆ ನನ್ನ ಭೇಟಿಯೇ ಸಾಕ್ಷಿʼ ಎಂದರು.

291125-Central-Minister-HD-Kumaraswamy-visit-VISL

‘ಪ್ರಧಾನಿ ನರೇಂದ್ರ ಮೋದಿ (NARENDRA MODI) ಅವರು ಉಕ್ಕು ಕ್ಷೇತ್ರದ ಬಲವರ್ಧನೆಗೆ ಅತಿಹೆಚ್ಚು ಮಹತ್ವ ನೀಡುತ್ತಿದ್ದಾರೆ. ಉಕ್ಕು ಉತ್ಪಾದನೆಯಲ್ಲಿ ಸ್ವಾವಲಂಭನೆ ಸಾಧಿಸಬೇಕು ಎನ್ನುವ ಹೆಗ್ಗುರಿಯನ್ನು ಮೋದಿ ಅವರು ಹೊಂದಿದ್ದಾರೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಬಹಳ ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದೇವೆ. ಹೀಗಾಗಿ ಕಾರ್ಮಿಕರು ಆತಂಕಗೊಳ್ಳುವುದು ಬೇಡʼ ಎಂದು ಹೇಳಿದರು.

291125-Central-Minister-HD-Kumaraswamy-visit-VISL

ಸಂಸದರಿಂದ ಪ್ರಮುಖ ವಿಚಾರ ಚರ್ಚೆ

ಇನ್ನು ಪರಿಶೀಲನೆ ವೇಳೆ ಸಂಸದ ಬಿ.ವೈ.ರಾಘವೇಂದ್ರ (BY RAGHAVENDRA) ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರಿಗೆ ಮಹತ್ವದ ವಿಷಯಗಳನ್ನು ತಿಳಿಸಿದ್ದಾರೆ. ಕಾರ್ಖಾನೆ ಪುನಶ್ಚೇತನಕ್ಕೆ ಅಗತ್ಯ ಕ್ರಮಗಳ ಕುರಿತು ತಿಳಿಸಿದ್ದಾರೆ.‌

ಇದನ್ನೂ ಓದಿ » ಭದ್ರಾವತಿ VISLಗೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ, ಮಹತ್ವದ ಸಭೆ, ಯಾರೆಲ್ಲ ಇದ್ದರು?

ಬಂಡವಾಳ ಹಿಂತೆಗೆದ ಪ್ರಕ್ರಿಯೆ ಬಳಿಕ ಮತ್ತು ಬೃಹತ್‌ ಕೈಗಾರಿಕೆ ಸಚಿವರಾದ ಮೇಲೆ ಹೆಚ್‌.ಡಿ.ಕುಮಾರಸ್ವಾಮಿ ಅವರು ಎರಡನೆ ಬಾರಿ ವಿಐಎಸ್‌ಎಲ್‌ಗೆ ಭೇಟಿ ನೀಡಿದ್ದಾರೆ. ಕಳೆದ 20 ವರ್ಷದಿಂದ ಸಚಿವರು, ಅಧಿಕಾರಿಗಳ ಜೊತೆಗೆ ನಿರಂತರ ಸಭೆಗಳಾಗಿವೆ. ಇವತ್ತಿನ ಸಭೆ ವಿಶ್ವಾಸ ಮೂಡಿಸಿದೆ. ಮುಂದೆ ಈ ಸಂಸ್ಥೆಯನ್ನು ಒಳ್ಳೆಯ ದಿಕ್ಕಿನಲ್ಲಿ ಕೊಂಡೊಯ್ಯಲು ಸಚಿವ ಕುಮಾರಸ್ವಾಮಿ ಅವರು ಸಂಕಲ್ಪ ಮಾಡಿದ್ದಾರೆ. ಸಂಸದನಾಗಿ ವಿಐಎಸ್‌ಎಲ್‌ಗೆ ಆಕ್ಸಿಜನ್‌ ಒದಗಿಸಿ ಕಾರ್ಖಾನೆ ನಿಲ್ಲದಂತೆ ನೋಡಿಕೊಂಡಿದ್ದೇನೆ. ಪುನಶ್ಚೇತನಕ್ಕೆ ಅಗತ್ಯ ಕ್ರಮ ಕೈಗೊಳ್ಳುತ್ತಿದ್ದೇವೆ.ಬಿ.ವೈ.ರಾಘವೇಂದ್ರ, ಸಂಸದ

HD Kumaraswamy visit to VISL

ಕಾರ್ಮಿಕರಲ್ಲಿ ಹೆಚ್ಚಿದ ನಿರೀಕ್ಷೆ

ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಮೇಲೆ ಹೆಚ್‌.ಡಿ.ಕುಮಾರಸ್ವಾಮಿ ಅವರು ಎರಡನೇ ಬಾರಿ ವಿಐಎಸ್‌ಎಲ್‌ ಕಾರ್ಖಾನೆಗೆ ಭೇಟಿ ನೀಡಿದ್ದಾರೆ. 2024ರ ಜೂನ್‌ 30ರಂದು ಕುಮಾರಸ್ವಾಮಿ ಅವರು ವಿಐಎಸ್‌ಎಲ್‌ಗೆ ಭೇಟಿ ನೀಡಿ ಪುನಶ್ಚೇತನ ಸಂಬಂಧ ಚರ್ಚೆ ನಡೆಸಿದ್ದರು. ಆ ಬಳಿಕ ಹಲವು ಸೇಲ್‌ ಅಧಿಕಾರಿಗಳ ಜೊತೆಗೆ ಹಲವು ಸಭೆಗಳನ್ನು ನಡೆಸಿದ್ದರು. ಈಗ ಎರಡನೇ ಬಾರಿ ವಿಐಎಸ್‌ಎಲ್‌ಗೆ ಭೇಟಿ ನೀಡಿದ್ದು, ಕಾರ್ಮಿಕರ ನಿರೀಕ್ಷೆ ಹೆಚ್ಚಿಸಿದೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment