ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 17 ಅಕ್ಟೋಬರ್ 2021 (FILE PHOTO)
ರಾಮ ಮಂದಿರ ನಿರ್ಮಾಣ ಸಂಬಂಧದ ಲೆಕ್ಕವನ್ನು ಜನತೆ ಮುಂದಿಡಬೇಕು. ನಿಷ್ಠೆ, ಪಾರದರ್ಶಕತೆ ಬಗ್ಗೆ ಮಾತನಾಡುವವರು ಲೆಕ್ಕ ಕೊಡಲು ಹಿಂದೇಟು ಹಾಕುವುದೇಕೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಮದುವೆ ಸಮಾರಂಭವೊಂದರಲ್ಲಿ ಪಾಲ್ಗೊಳ್ಳಲು ಭದ್ರಾವತಿಗೆ ಆಗಮಿಸಿದ್ದ ಕುಮಾರಸ್ವಾಮಿ ಅವರು, ಮೊದಲ ಹಂತದಲ್ಲಿ 1989 ರಿಂದ 91ರವರೆಗೆ ಅಡ್ವಾಣಿ ಅವರು ರಥಯಾತ್ರೆ ನಡೆಸಿದ್ದರು. ಆ ಸಂದರ್ಭ ಸಂಗ್ರಹವಾದ ಹಣದ ಬಗ್ಗೆ ಲೆಕ್ಕ ಯಾರಿಟ್ಟಿದ್ದಾರೆ. ಅದನ್ನು ಜನತೆಯ ಮುಂದಿಡಬೇಕಾಲ್ಲ ಎಂದು ಪ್ರಶ್ನಿಸಿದರು.
ನಿಷ್ಠೆ, ಪ್ರಮಾಣಿಕತೆ ಬಗ್ಗೆ ಮಾತನಾಡುವವರು ಮೊದಲು ರಾಮಮಂದಿರಕ್ಕೆ ಸಂಗ್ರಹವಾದ ಹಣದ ಲೆಕ್ಕ ಕೊಡಬೇಕು ಎಂದು ಸವಾಲು ಹಾಕಿದರು.

ಐದಾರು ವಿಷಯ ಪ್ರಸ್ತಾಪಿಸಿದ್ದೇನೆ
ಜೆಡಿಎಸ್ ಪಕ್ಷ ಅಲ್ಪಸಂಖ್ಯಾತರನ್ನು ಕಣಕ್ಕಿಳಿಸಿ ಕಾಂಗ್ರೆಸ್ ಪಕ್ಷವನ್ನು ಸೋಲಿಸುತ್ತಿದೆ ಎಂದು ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದ ಹೆಚ್.ಡಿ.ಕುಮಾರಸ್ವಾಮಿ ಅವರು, ಅಲ್ಪಸಂಖ್ಯಾತರ ಕುರಿತು ಸಿದ್ದರಾಮಯ್ಯ ಅವರ ನಿಲುವುಗಳು ಏನಾಗದ್ದವು ಅನ್ನುವ ಐದಾರು ವಿಚಾರಗಳನ್ನು ನಾನು ಪ್ರಸ್ತಾಪ ಮಾಡಿದ್ದೇನೆ. ಅವರು ಈ ವಿಚಾರವನ್ನು ನಿಲ್ಲಿಸುವುದಾದರೆ ನಾನು ಕೂಡ ನಿಲ್ಲಿಸುತ್ತೇನೆ ಎಂದು ತಿಳಿಸಿದರು.

ಆರ್.ಎಸ್.ಎಸ್ ಪ್ರಚಾರಕರು ಹೇಳಿದ್ದು
ಇನ್ನು, ಆರ್.ಎಸ್.ಎಸ್ ಕುರಿತು ತಮ್ಮ ಹೇಳಿಕೆ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, ಆರ್.ಎಸ್.ಎಸ್ ಪ್ರಚಾರಕರು ಲೇಖಕರ ಮುಂದೆ ಹೇಳಿದ್ದನ್ನೆ ನಾನು ಹೇಳಿದ್ದೇನೆ. ಆರ್.ಎಸ್.ಎಸ್ ಪ್ರಚಾರಕರ ಹೇಳಿಕೆಗಳನ್ನು ಪುಸ್ತಕದಲ್ಲಿ ಪ್ರಕಟಿಸಲಾಗಿದೆ. ಅದನ್ನೆ ನಾನು ಹೇಳಿದ್ದೇನೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡರು.
ಮದುವೆ ಸಮಾರಂಭದ ಬಳಿಕ ಮಾಜಿ ಶಾಸಕ ಅಪ್ಪಾಜಿಗೌಡ ನಿವಾಸಕ್ಕೆ ಭೇಟಿ ನೀಡಿದ್ದರು.

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















