ಭದ್ರಾವತಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ, ರಾಮ ಮಂದಿರಕ್ಕೆ ಸಂಗ್ರಹವಾದ ಹಣದ ಲೆಕ್ಕ ಕೊಡುವಂತೆ ಸವಾಲು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 17 ಅಕ್ಟೋಬರ್ 2021 (FILE PHOTO)

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ರಾಮ ಮಂದಿರ ನಿರ್ಮಾಣ ಸಂಬಂಧದ ಲೆಕ್ಕವನ್ನು ಜನತೆ ಮುಂದಿಡಬೇಕು. ನಿಷ್ಠೆ, ಪಾರದರ್ಶಕತೆ ಬಗ್ಗೆ ಮಾತನಾಡುವವರು ಲೆಕ್ಕ ಕೊಡಲು ಹಿಂದೇಟು ಹಾಕುವುದೇಕೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಮದುವೆ ಸಮಾರಂಭವೊಂದರಲ್ಲಿ ಪಾಲ್ಗೊಳ್ಳಲು ಭದ್ರಾವತಿಗೆ ಆಗಮಿಸಿದ್ದ ಕುಮಾರಸ್ವಾಮಿ ಅವರು, ಮೊದಲ ಹಂತದಲ್ಲಿ 1989 ರಿಂದ 91ರವರೆಗೆ ಅಡ್ವಾಣಿ ಅವರು ರಥಯಾತ್ರೆ ನಡೆಸಿದ್ದರು. ಆ ಸಂದರ್ಭ ಸಂಗ್ರಹವಾದ ಹಣದ ಬಗ್ಗೆ ಲೆಕ್ಕ ಯಾರಿಟ್ಟಿದ್ದಾರೆ. ಅದನ್ನು ಜನತೆಯ ಮುಂದಿಡಬೇಕಾಲ್ಲ ಎಂದು ಪ್ರಶ್ನಿಸಿದರು.

ನಿಷ್ಠೆ, ಪ್ರಮಾಣಿಕತೆ ಬಗ್ಗೆ ಮಾತನಾಡುವವರು ಮೊದಲು ರಾಮಮಂದಿರಕ್ಕೆ ಸಂಗ್ರಹವಾದ ಹಣದ ಲೆಕ್ಕ ಕೊಡಬೇಕು ಎಂದು ಸವಾಲು ಹಾಕಿದರು.

SHIVAMOGGA LIVE CONTATCT

ಐದಾರು ವಿಷಯ ಪ್ರಸ್ತಾಪಿಸಿದ್ದೇನೆ

ಜೆಡಿಎಸ್ ಪಕ್ಷ ಅಲ್ಪಸಂಖ್ಯಾತರನ್ನು ಕಣಕ್ಕಿಳಿಸಿ ಕಾಂಗ್ರೆಸ್ ಪಕ್ಷವನ್ನು ಸೋಲಿಸುತ್ತಿದೆ ಎಂದು ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದ ಹೆಚ್.ಡಿ.ಕುಮಾರಸ್ವಾಮಿ ಅವರು, ಅಲ್ಪಸಂಖ್ಯಾತರ ಕುರಿತು ಸಿದ್ದರಾಮಯ್ಯ ಅವರ ನಿಲುವುಗಳು ಏನಾಗದ್ದವು ಅನ್ನುವ ಐದಾರು ವಿಚಾರಗಳನ್ನು ನಾನು ಪ್ರಸ್ತಾಪ ಮಾಡಿದ್ದೇನೆ. ಅವರು ಈ ವಿಚಾರವನ್ನು ನಿಲ್ಲಿಸುವುದಾದರೆ ನಾನು ಕೂಡ ನಿಲ್ಲಿಸುತ್ತೇನೆ ಎಂದು ತಿಳಿಸಿದರು.

ADVT JULY NANJAPPA HOSPITAL HOME LAB TESTING

ಆರ್.ಎಸ್.ಎಸ್ ಪ್ರಚಾರಕರು ಹೇಳಿದ್ದು

ಇನ್ನು, ಆರ್.ಎಸ್.ಎಸ್ ಕುರಿತು ತಮ್ಮ ಹೇಳಿಕೆ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, ಆರ್.ಎಸ್.ಎಸ್ ಪ್ರಚಾರಕರು ಲೇಖಕರ ಮುಂದೆ ಹೇಳಿದ್ದನ್ನೆ ನಾನು ಹೇಳಿದ್ದೇನೆ. ಆರ್.ಎಸ್.ಎಸ್ ಪ್ರಚಾರಕರ ಹೇಳಿಕೆಗಳನ್ನು ಪುಸ್ತಕದಲ್ಲಿ ಪ್ರಕಟಿಸಲಾಗಿದೆ. ಅದನ್ನೆ ನಾನು ಹೇಳಿದ್ದೇನೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡರು.

ಮದುವೆ ಸಮಾರಂಭದ ಬಳಿಕ ಮಾಜಿ ಶಾಸಕ ಅಪ್ಪಾಜಿಗೌಡ ನಿವಾಸಕ್ಕೆ ಭೇಟಿ ನೀಡಿದ್ದರು.

1632381453891714 0

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment