ಅಪ್ಪಾಜಿಗೌಡ ಸಾವಿನ ಕುರಿತು ಮಾಜಿ ಸಿಎಂ ಅನುಮಾನ, ಅವರಿಗೆ ಕರೋನ ಬಂದಿರಲಿಲ್ಲ ಅಂದರು ಅಪ್ಪಾಜಿ ಪುತ್ರ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 ಸೆಪ್ಟಂಬರ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ನಿಧನದ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್‍.ಡಿ.ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ. ಅಪ್ಪಾಜಿಗೌಡ ಅವರಿಗೆ ಆಗದವರು ಅವರ ಸಾವಿಗೆ ಕಾರಣವಾಗಿರಬಹುದು ಎಂದು ತಿಳಿಸಿದ್ದಾರೆ.

ಅಪ್ಪಾಜಿಗೌಡ ಅವರ ಪುಣ್ಯ ಸ್ಮರಣೆ ಕಾರ್ಯಕ್ಕೆ ಭದ್ರಾವತಿಗೆ ಆಗಮಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಅಪ್ಪಾಜಿಗೌಡ ಅವರ ಸಾವಿನ ಕುರಿತು ಅವರ ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ. ಒಂದು ಖಾಸಗಿ ಆಸ್ಪತ್ರೆಯಲ್ಲಿ ಜನಪ್ರತಿನಿಧಿಯೊಬ್ಬರಿಗೆ ವೆಂಟಿಲೇಟರ್ ಸಿಗಲಿಲ್ಲ ಅಂದರೆ ಏನರ್ಥ ಎಂದು ಪ್ರಶ್ನಿಸಿದರು.

ಕುಟುಂಬದವರಾರಿಗೂ ಸೋಂಕು ಇಲ್ಲ

ಅಪ್ಪಾಜಿಗೌಡ ಅವರಿಗೆ ಕರೋನ ಇತ್ತು ಎಂದು ಹೇಳುತ್ತಿದ್ದಾರೆ. ಆದರೆ ಅವರ ಕುಟುಂಬದವರಾರಿಗೂ ಸೋಂಕು ಕಾಣಿಸಿಕೊಂಡಿಲ್ಲ. ಇದೆಲ್ಲವನ್ನು ಗಮನಿಸಿದರೆ ಅಪ್ಪಾಜಿಗೌಡ ಅವರ ಸಾವಿನ ಕುರಿತು ಅನುಮಾನ ಮೂಡುತ್ತದೆ. ವಿಚಾರ ಗೊತ್ತಾಗಿದ್ದರೆ ಬೆಳಗ್ಗೆಯೇ ಅವರನ್ನು ಬೆಂಗಳೂರಿಗೆ ಕರೆಯಿಸಿಕೊಂಡು, ಚಿಕಿತ್ಸೆ ಕೊಡಿಸುತ್ತಿದ್ದೆ ಎಂದರು.

ಕರೋನ ಅಲ್ಲ ಹೃದಯಾಘಾತ

ಸ್ಮರಣೆ ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡಿದ ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರ ಪುತ್ರ ಅಜಿತ್, ನಮ್ಮ ತಂದೆಯವರಿಗೆ ಕರೋನ ಬಂದಿರಲಿಲ್ಲ. ಅವರಿಗೆ ಹೃದಯಾಘಾತವಾಗಿದೆ. ಡಾಕ್ಟರ್‍ಗಳು ಕೋವಿಡ್‍ನಿಂದ ತೀರಿಕೊಂಡಿದ್ದಾರ ಎಂದು ಸುಳ್ಳು ಹೇಳಿದ್ದಾರೆ. ತಂದೆಯವರು ಆರೋಗ್ಯವಾಗಿದ್ದರು. ಸಂಜೆ 5.30ರ ಹೊತ್ತಿಗೆ ಉಸಿರಾಟದ ಸಮಸ್ಯೆಯಾಗಿತ್ತು ಎಂದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment