ಹೊಳೆಹೊನ್ನೂರು: ಪಟ್ಟಣದ ಭದ್ರಾ ಸೇತುವೆ ಬಳಿ ಇತ್ತೀಚೆಗೆ ನಿರ್ಮಿಸಿರುವ ಬೈಪಾಸ್ ರಸ್ತೆಯಲ್ಲಿ ಬಿರುಕು (Crack) ಕಾಣಿಸಿಕೊಂಡಿದೆ. ಇದನ್ನು ವಿರೋಧಿಸಿ ನಾಗರಿಕರು ಪ್ರತಿಭಟನೆ ನಡೆಸಿದರು.
ಒಂದು ತಿಂಗಳ ಹಿಂದೆ ಸಂಸದ ಬಿ.ವೈ.ರಾಘವೇಂದ್ರ ಹೆದ್ದಾರಿಯ ಲೋಕಾರ್ಪಣೆ ಮಾಡಿದ್ದರು. ಆದರೆ ಅವೈಜ್ಞಾನಿ ಕಾಮಗಾರಿಯಿಂದ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ರಸ್ತೆ ಅಭಿವೃದ್ಧಿಪಡಿಸುವಲ್ಲಿ ಗುತ್ತಿಗೆದಾರರು ಆತುರ ತೋರಿದ್ದರಿಂದ ಅದು ಕುಸಿಯುವ ಹಂತದಲ್ಲಿದೆ. ಕಾಮಗಾರಿ ನಡೆಯುತ್ತಿರುವಾಗಲೇ ಎರಡು ಮೂರು ಬಾರಿ ರಸ್ತೆ ಕುಸಿತವಾಗಿತ್ತು. ಇದರಿಂದ ಎಚ್ಚೆತ್ತುಕೊಳ್ಳದೇ, ಕಾಮಗಾರಿ ಪೂರ್ಣಗೊಳಿಸಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ರಸ್ತೆ ಕುಸಿಯುವ ಆತಂಕ ಸೃಷ್ಟಿಯಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ರಸ್ತೆಗೆ ಪೂರ್ತಿ ಪ್ರಮಾಣದಲ್ಲಿ ತಡೆಗೋಡೆ ನಿರ್ಮಿಸಿದ್ದರೆ ರಸ್ತೆ ಕುಸಿಯುತ್ತಿರಲಿಲ್ಲ. ಕಾಮಗಾರಿಯೂ ಅವೈಜ್ಞಾನಿಕವಾಗಿದ್ದು, ಇದರಿಂದ ವಾಹನ ಸವಾರರಿಗೆ ಅಪಾಯ ತಪ್ಪಿದ್ದಲ್ಲ’ ಎಂದು ದೂರಿದರು.
ಪ್ರತಿಭಟನೆಯಲ್ಲಿ ನಾಗೇಶ, ಕೇಶವ, ನಾಗರಾಜ್, ನವೀನ, ವೆಂಕಟೇಶ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ » ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಕುಸಿತ, ಹೊರ ಹರಿವು ಎಷ್ಟಿದೆ?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200