Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಭದ್ರಾವತಿ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿತ್ತು? ಏನೆಲ್ಲ ಇತ್ತು?

ಭದ್ರಾವತಿ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿತ್ತು? ಏನೆಲ್ಲ ಇತ್ತು?

16/09/2024 9:47 AM
ನಿತಿನ್‌ ಕೈದೊಟ್ಲು

BHADRAVATHI NEWS, 16 SEPTEMBER 2024 : ಹೊಸಮನೆ ಬಡಾವಣೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಸಭಾ ಗಣಪತಿಯ ಅದ್ಧೂರಿ ಮೆರವಣಿಗೆ (Procession) ನಡೆಯಿತು. ಭದ್ರಾವತಿ ನಗರದ ವಿವಿಧೆಡೆ ಮೆರವಣಿಗೆಯಲ್ಲಿ ಸಾಗಿದ ಗಣಪತಿಯನ್ನು ನಗರಸಭೆ ಮುಂಭಾಗ ಭದ್ರಾ ನದಿಯಲ್ಲಿ ವಿಸರ್ಜಿಸಲಾಯಿತು.

ಎಲ್ಲೆಲ್ಲಿ ಸಾಗಿತು ಮೆರವಣಿಗೆ?

ಬೆಳಗ್ಗೆ ನಗರಸಭೆ ಸದಸ್ಯ ಬಿ.ಕೆ.ಮೋಹನ್ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಹೊಸಮನೆ ಶಿವಾಜಿ ವೃತ್ತದವರೆಗೂ ತೆರಳಿ ಅಲ್ಲಿಂದ ರಂಗಪ್ಪ ಸರ್ಕಲ್‌ ಮೂಲಕ ಮಾಧವಾಚಾರ್ ವೃತ್ತ, ಹಾಲಪ್ಪ ವೃತ್ತ. ಕೆಎಸ್‌ಆರ್‌ಟಿಸಿ ಮುಖ್ಯ ಬಸ್‌ ನಿಲ್ದಾಣದ ಮೂಲಕ ಲೋಯರ್ ಹುತ್ತಾ ಬಸ್ ನಿಲ್ದಾಣದವರೆಗೂ ತರಳಿತು. ನಂತರ ತರೀಕೆರೆ ರಸ್ತೆ ಗಾಂಧಿವೃತ್ತದ ಮೂಲಕ ಆಗಮಿಸಿ ನಗರಸಭೆ ಕಚೇರಿ ಎದುರು ಭದ್ರಾ ನದಿಯಲ್ಲಿ ವಿಸರ್ಜನೆ ಮಾಡಲಾಯಿತು.

Hindu-Mahasabha-Ganesh-procession-in-Bhadravathi

ಡೊಳ್ಳು, ವಿರಗಾಸೆ, ಕಿಲು ಕುದುರೆ

ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಭಾಗವಹಿಸಿದ್ದವು. ಡೊಳ್ಳು ಕುಣಿತ, ವೀರಗಾಸೆ, ಕೀಲುಕುದುರೆ, ವಾದ್ಯಮೇಳಗಳು ಭಾಗವಹಿಸಿದ್ದವು. ಇವುಗಳ ಶಬ್ದಕ್ಕೆ ಯುವಕ, ಯುವತಿಯರು ಹೆಜ್ಜೆ ಹಾಕಿದರು. ಹೊಸಮನೆ ಮುಖ್ಯ ರಸ್ತೆಯಿಂದಲೂ ಡಿ.ಜೆ. ಸೌಂಡ್ ಮೊಳಗಿತು. ಸೌಂಡ್ ಸಿಸ್ಟಂ ಅಬ್ಬರಕ್ಕೆ ಯುವಕ, ಯುವತಿಯರು ಕುಣಿದು ಕುಪ್ಪಳಿಸಿದರು.

Bhadravathi Hindu Mahasabha Ganesh procession

ರಾರಾಜಿಸಿದ ಕೇಸರಿ, ಫೋಟೊಗಳ ಪ್ರದರ್ಶನ

ಮೆರವಣಿಗೆಯ ಹಾದಿ ಉದ್ದಕ್ಕು ಕೇಸರಿ ಬಾವುಟ ರಾರಾಜಿಸಿದವು. ಯುವಕರು ಬಾವುಟಳನ್ನು ತಿರುಗಿಸುತ್ತ ಘೋಷಣೆ ಕೂಗುತ್ತಿದ್ದರು. ಇನ್ನು, ಬಜರಂಗದಳ ಕಾರ್ಯಕರ್ತ ಸುನಿಲ್‌ ಕುಮಾರ್, ಶಿವಮೊಗ್ಗದ ಹರ್ಷ, ನಟ ಪುನೀತ್ ರಾಜ್‌ಕುಮಾ‌ರ್ ಅವರ ಭಾವಚಿತ್ರಗಳನ್ನು ಹಿಡಿದು ಕೆಲ ಯುವಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ನಟ ದರ್ಶನ್ ಅಭಿಮಾನಿಗಳು ಸೇಬಿನ ಹಾರ ಹಾಕಿ ಪ್ರಾರ್ಥಿಸಿದರು.

ವಿವಿಧ ಬಗೆಯ ಹಾರ ಅರ್ಪಣೆ

ವಿವಿಧ ಸಂಘ ಸಂಸ್ಥೆಗಳು ಹಾಗೂ ಪದಾಧಿಕಾರಿಗಳು ಹಿಂದೂ ಮಹಾಸಭಾ ಗಣಪತಿಗೆ ವಿವಿಧ ಬಗೆಯ ಹಾರಗಳನ್ನು ಅರ್ಪಿಸಿದರು. ಸೇಬು, ಮೂಸಂಬಿ ಹಣ್ಣಿನ ಹಾರಗಳು, ವಿವಿಧ ಬಗೆಯ ಹೂವಿನ ಹಾರಗಳನ್ನು ಗಣೇಶ ಮೂರ್ತಿಗೆ ಅರ್ಪಣೆ ಮಾಡಿದರು.

Banana-Mandi-In-Shimoga-APMC

ಉಪಾಹಾರ, ಪಾನಕ, ಸಿನಿ ತಿನಿಸುಗಳು

ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಭಕ್ತರಿಗೆ ರಸ್ತೆಯುದ್ದಕ್ಕೂ ವಿವಿಧ ಸಂಘಟನೆಗಳು ಉಪಾಹಾರ,  ಊಟದ ವ್ಯವಸ್ಥೆ ಮಾಡಿದ್ದರು. ವಿವಿಧ ಸಿಹಿ ತಿನಿಗಳನ್ನು ಕೂಡ ವಿತರಿಸಲಾಯಿತು. ದಣಿದವರಿಗೆ ಪಾನಕ, ನೀರು ವ್ಯವಸ್ಥೆ ಮಾಡಲಾಗಿತ್ತು.

ಇದನ್ನೂ ಓದಿ » ಇವು ಸಾಮಾನ್ಯ ಗುಂಡಿಗಳಲ್ಲ, ಬಂದ್‌ ಆಗಲು PM, CMಗಳೆ ಬರಬೇಕು

ಎಲ್ಲೆಲ್ಲೂ ಪೊಲೀಸ್‌ ಸರ್ಪಗಾವಲು

ಇನ್ನು, ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಿನ್ನೆಲೆ ಬಿಗಿ ಪೊಲೀಸ್‌ ಸರ್ಪಗಾವಲು ಹಾಕಲಾಗಿತ್ತು. ತರೀಕೆರೆ ರಸ್ತೆ ಮಸೀದಿ ಮುಂಭಾಗದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. 2 ಹೆಚ್ಚುವರಿ ಪೊಲೀಸ್ ಅಧೀಕ್ಷಕರು, 17 ಪೊಲೀಸ್ ಉಪಾಧೀಕ್ಷಕರು, 45 ಪೊಲೀಸ್‌ ಇನ್ಸ್‌ಪೆಕ್ಟರ್‌ಗಳು, 65 ಪಿಎಸ್‌ಐ, 190 ಎಎಸ್‌ಐ, 1450 ಹೆಡ್‌ಕಾನ್‌ಸ್ಟೇಬಲ್ಸ್‌, 450 ಗೃಹರಕ್ಷಕ ದಳ ಸಿಬ್ಬಂದಿ, 1 ಆರ್‌ಎಎಫ್, 5 ಡಿಎಆರ್, ಒಂದು ಕ್ಯೂಆರ್‌ಟಿ ಹಾಗೂ 8 ಕೆಎಸ್‌ಆರ್‌ಪಿ ತುಕಡಿಗಳು ಸೇರಿ 3000ಕ್ಕೂ ಹೆಚ್ಚು ಸಿಬ್ಬಂದಿ ಕರ್ತವ್ಯದಲ್ಲಿ ಪಾಲ್ಗೊಂಡಿದ್ದರು.

HS-Sundaresh

ಇದನ್ನೂ ಓದಿ » ದಿಢೀರ್‌ ಬಲಕ್ಕೆ ತಿರುಗಿದ ಲಾರಿ, ಬೈಕ್‌ ಸವಾರ ಮೆಗ್ಗಾನ್‌ಗೆ ದಾಖಲು – 3 ಫಟಾಫಟ್‌ ನ್ಯೂಸ್‌

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

June-2025-Report-Shivamogga-Live

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Crime-News-General-Image ದಿಢೀರ್‌ ಬಲಕ್ಕೆ ತಿರುಗಿದ ಲಾರಿ, ಬೈಕ್‌ ಸವಾರ ಮೆಗ್ಗಾನ್‌ಗೆ ದಾಖಲು – 3 ಫಟಾಫಟ್‌ ನ್ಯೂಸ್‌
Next Article Google-Pay-general-image. GOOGLE PAY LOAN, ಬ್ಯಾಂಕ್‌ಗೆ ಹೋಗೋದೆ ಬೇಡ, ಸಿಗುತ್ತೆ ಲಕ್ಷ ರೂ. ಸಾಲ

ಇದನ್ನೂ ಓದಿ

Areca-Farm-Adike-tota-in-Shimoga
BHADRAVATHI

ಅಡಿಕೆ ತೋಟದಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿ ವ್ಯಕ್ತಿ ಸಾವು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/07/2025
Bhadra-Dam-Water-Out-Flow
BHADRAVATHI

BREAKING NEWS – ಭದ್ರಾ ಜಲಾಶಯದ ಗೇಟುಗಳು ಓಪನ್, ಎಷ್ಟು ನೀರು ಹೊಳೆಗೆ ಹರಿಸಲಾಗ್ತಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/07/2025
Jambaraghatta-incident-one-arrested
BHADRAVATHI

ದೆವ್ವ ಬಿಡಿಸೋದಾಗಿ ಕೋಲಲ್ಲಿ ಹೊಡೆದು ಹಿಂಸೆ, ನೀರಿಗಾಗಿ ಅಂಗಲಾಚುತ್ತ ಪ್ರಾಣ ಬಿಟ್ಟ ಮಹಿಳೆ, ವಿಡಿಯೋ ವೈರಲ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/07/2025
Bhadra-Dam-General-Image.
BHADRAVATHI

ಭದ್ರಾ ಜಲಾಶಯದ ಒಳ ಹರಿವು ತುಸು ಏರಿಕೆ, ಇವತ್ತು ನೀರಿನ ಮಟ್ಟ ಎಷ್ಟಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/07/2025
Bhadra-Dam-General-Image
BHADRAVATHI

ಭದ್ರಾ ಡ್ಯಾಮ್‌ನ ಒಳ ಹರಿವು ಕುಸಿತ, ಇವತ್ತು ಎಷ್ಟಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
06/07/2025
Bhadra-Dam-General-Image
BHADRAVATHI

ಭದ್ರಾ ಜಲಾಶಯದ ನೀರಿನ ಮಟ್ಟ ಒಂದೂವರೆ ಅಡಿ ಹೆಚ್ಚಳ, ಇವತ್ತು ಎಷ್ಟಿದೆ ಒಳ ಹರಿವು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
05/07/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?