ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | ಹೊಳೆಹೊನ್ನೂರು | 11 ಜುಲೈ 2019
ಬಾರ್ ಕ್ಯಾಶಿಯರ್’ನನ್ನು ಅಡ್ಡಗಟ್ಟಿ ಹಣ ದೋಚಿದ್ದ ನಾಲ್ವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರ ಪೈಕಿ ಅದೇ ಮದ್ಯದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದವನು ಸೇರಿದ್ದಾನೆ.
ಜಂಬರಘಟ್ಟ ಗ್ರಾಮದ ಬಸವರಾಜ್ (38), ಶ್ರೀನಿವಾಸ್ ಅಲಿಯಾಸ್ ಗೋವಾ (24), ನವೀನ್ (23), ಅವಿನಾಶ್ (24) ಬಂಧಿತರು. ಬಾರ್ ಕ್ಯಾಶಿಯರ್ ವೆಂಕಟೇಶ್, ಸೋಮವಾರ ರಾತ್ರಿ 85 ಸಾವಿರ ಹಣ ತೆಗೆದುಕೊಂಡು ಜಂಬರಘಟ್ಟಕ್ಕೆ ತೆರಳುತ್ತಿದ್ದರು. ಈ ವೇಳೆ ವೆಂಕಟೇಶ್ ಅವರನ್ನು ಅಡ್ಡಗಟ್ಟಿದ ಮುಸುಕುಧಾರಿಗಳು, ಬೆದರಿಸಿ 85 ಸಾವಿರ ರೂ. ಹಣ ದೋಚಿದ್ದರು. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಗೆ ವೆಂಕಟೇಶ್ ದೂರು ನೀಡಿದ್ದರು.
ಸುಳಿವು ಕೊಟ್ಟವನು ಬಾರ್ ಒಳಗೆ ಇದ್ದ
ಪ್ರಕರಣದ ತನಿಖೆ ಆರಂಭಿಸಿದ ಹೊಳೆಹೊನ್ನೂರು ಪೊಲೀಸರಿಗೆ ವೆಂಕಟೇಶ್, ಬಾರ್’ನಿಂದ ಹಣ ತೆಗೆದುಕೊಂಡು ಹೋಗುವ ಮಾಹಿತಿಯನ್ನು ಬಾರ್ ಒಳಗಿನವರೇ ಕೊಟ್ಟಿರುವ ಅನುಮಾನ ಮೂಡಿತು. ವಿಚಾರಣೆ ನಡೆಸಿದಾಗ ಅದೇ ಬಾರ್’ನಲ್ಲಿ ಕೆಲಸ ಮಾಡುತ್ತಿದ್ದ ಬಸವರಾಜು ಸಿಕ್ಕಿಬಿದ್ದಿದ್ದಾನೆ.
ಬಸವರಾಜು ನೀಡಿದ ಮಾಹಿತಿ ಆಧಾರದ ಮೇಲೆ ಉಳಿದವರು, ವೆಂಕಟೇಶ್ ಅವರನ್ನು ಅಡ್ಡಗಟ್ಟಿ ಹಣ ದೋಚಿದ್ದಾರೆ. ಪೊಲೀಸರ ಮಿಂಚಿನ ಕಾರ್ಯಾಚರಣೆಯಿಂದ, ಆರೋಪಿಗಳು ಶೀಘ್ರದಲ್ಲೇ ಪತ್ತೆಯಾಗಿದ್ದಾರೆ. ಇವರಿಂದ 80 ಸಾವಿರ ಹಣ, ಘಟನೆಗೆ ಬಳಿಸಿದ್ದ 45 ಸಾವಿರ ಮೌಲ್ಯದ ಬೈಕ್, 25 ಸಾವಿರ ಮೌಲ್ಯದ 4 ಮೊಬೈಲ್ ವಶಕ್ಕೆ ಪಡೆಯಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





