ಶಿವಮೊಗ್ಗ ಲೈವ್.ಕಾಂ | ಹೊಳೆಹೊನ್ನೂರು | 11 ಜುಲೈ 2019
ಬಾರ್ ಕ್ಯಾಶಿಯರ್’ನನ್ನು ಅಡ್ಡಗಟ್ಟಿ ಹಣ ದೋಚಿದ್ದ ನಾಲ್ವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರ ಪೈಕಿ ಅದೇ ಮದ್ಯದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದವನು ಸೇರಿದ್ದಾನೆ.
ಶಿವಮೊಗ್ಗ ಲೈವ್.ಕಾಂ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಜಂಬರಘಟ್ಟ ಗ್ರಾಮದ ಬಸವರಾಜ್ (38), ಶ್ರೀನಿವಾಸ್ ಅಲಿಯಾಸ್ ಗೋವಾ (24), ನವೀನ್ (23), ಅವಿನಾಶ್ (24) ಬಂಧಿತರು. ಬಾರ್ ಕ್ಯಾಶಿಯರ್ ವೆಂಕಟೇಶ್, ಸೋಮವಾರ ರಾತ್ರಿ 85 ಸಾವಿರ ಹಣ ತೆಗೆದುಕೊಂಡು ಜಂಬರಘಟ್ಟಕ್ಕೆ ತೆರಳುತ್ತಿದ್ದರು. ಈ ವೇಳೆ ವೆಂಕಟೇಶ್ ಅವರನ್ನು ಅಡ್ಡಗಟ್ಟಿದ ಮುಸುಕುಧಾರಿಗಳು, ಬೆದರಿಸಿ 85 ಸಾವಿರ ರೂ. ಹಣ ದೋಚಿದ್ದರು. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಗೆ ವೆಂಕಟೇಶ್ ದೂರು ನೀಡಿದ್ದರು.
ಸುಳಿವು ಕೊಟ್ಟವನು ಬಾರ್ ಒಳಗೆ ಇದ್ದ
ಪ್ರಕರಣದ ತನಿಖೆ ಆರಂಭಿಸಿದ ಹೊಳೆಹೊನ್ನೂರು ಪೊಲೀಸರಿಗೆ ವೆಂಕಟೇಶ್, ಬಾರ್’ನಿಂದ ಹಣ ತೆಗೆದುಕೊಂಡು ಹೋಗುವ ಮಾಹಿತಿಯನ್ನು ಬಾರ್ ಒಳಗಿನವರೇ ಕೊಟ್ಟಿರುವ ಅನುಮಾನ ಮೂಡಿತು. ವಿಚಾರಣೆ ನಡೆಸಿದಾಗ ಅದೇ ಬಾರ್’ನಲ್ಲಿ ಕೆಲಸ ಮಾಡುತ್ತಿದ್ದ ಬಸವರಾಜು ಸಿಕ್ಕಿಬಿದ್ದಿದ್ದಾನೆ.
ಬಸವರಾಜು ನೀಡಿದ ಮಾಹಿತಿ ಆಧಾರದ ಮೇಲೆ ಉಳಿದವರು, ವೆಂಕಟೇಶ್ ಅವರನ್ನು ಅಡ್ಡಗಟ್ಟಿ ಹಣ ದೋಚಿದ್ದಾರೆ. ಪೊಲೀಸರ ಮಿಂಚಿನ ಕಾರ್ಯಾಚರಣೆಯಿಂದ, ಆರೋಪಿಗಳು ಶೀಘ್ರದಲ್ಲೇ ಪತ್ತೆಯಾಗಿದ್ದಾರೆ. ಇವರಿಂದ 80 ಸಾವಿರ ಹಣ, ಘಟನೆಗೆ ಬಳಿಸಿದ್ದ 45 ಸಾವಿರ ಮೌಲ್ಯದ ಬೈಕ್, 25 ಸಾವಿರ ಮೌಲ್ಯದ 4 ಮೊಬೈಲ್ ವಶಕ್ಕೆ ಪಡೆಯಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]